Featured

ಉಳ್ಳಾಲ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ;  ಆರೋಪಿಗಳು 4 ದಿನ ಪೊಲೀಸ್‌ ಕಸ್ಟಡಿಗೆ – vishwanews24

ಉಳ್ಳಾಲ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ;  ಆರೋಪಿಗಳು 4 ದಿನ ಪೊಲೀಸ್‌ ಕಸ್ಟಡಿಗೆ

ಉಳ್ಳಾಲ: ಮುನ್ನೂರು ಗ್ರಾಮದ ನೇತ್ರಾವತಿ ನದಿ ತಟದ ಬಂಗ್ಲೆ ಹೌಸ್‌ ಬಳಿ ಪಶ್ಚಿಮ ಬಂಗಾಲ ಮೂಲದ ಯುವತಿಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಸಂತ್ರಸ್ತೆ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಶನಿವಾರ ಯುವತಿಯನ್ನು ಅತ್ಯಾಚಾರ ಮಾಡಲಾಗಿದೆಯಾ ಎನ್ನುವ ವೈದ್ಯಕೀಯ ವರದಿ ಪೊಲೀಸರ ಕೈ ಸೇರಲಿದೆ. ಘಟನೆ ನಡೆದ 24 ಗಂಟೆಯೊಳಗೆ ರಿಕ್ಷಾ ಚಾಲಕ ಮೂಲ್ಕಿ ಮೂಲದ ಪ್ರಭುರಾಜ್‌, ಕುಂಪಲದ ಮಿಥುನ್‌ ಮತ್ತು ಪಡೀಲ್‌ನ ಮಣಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಸಂತ್ರಸ್ತ ಯುವತಿ 3-4 ತಿಂಗಳ ಹಿಂದೆ ಪ್ರಿಯತಮನ ಜತೆಗೆ ಊರು ಬಿಟ್ಟು ಆತನ ಜತೆಗೆ ಕೇರಳ ಕಡೆಗೆ ಕೆಲಸಕ್ಕೆ ಬಂದಿದ್ದಳು. ಎ. 17ರಂದು ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಪ್ರಿಯತಮ ಮೊಬೈಲನ್ನು ಒಡೆದು ಹಾಕಿ ಮನೆಯಿಂದ ಹೊರ ಹಾಕಿದ್ದ. ಇದರಿಂದ ನೊಂದ ಯುವತಿ ಕೇರಳದಿಂದ ಮಂಗಳೂರಿಗೆ ಬರುವ ರೈಲು ಹತ್ತಿದ್ದಳು. ಮಂಗಳೂರಿನಲ್ಲಿ ಇಳಿದವಳಿಗೆ ಮೊಬೈಲ್‌ ರಿಪೇರಿ ವಿಚಾರದಲ್ಲಿ ರಿಕ್ಷಾ ಚಾಲಕ ಪ್ರಭುರಾಜ್‌ ಜತೆಗೆ ಮಾತನಾಡಿದ್ದು, ಹಣವಿಲ್ಲದ ಕಾರಣ ಊರಿಗೆ ತೆರಳಲು ಸಹಕರಿಸುವಂತೆ ಕೇಳಿಕೊಂಡಿದ್ದಳು.

ಅದನ್ನೇ ದುರ್ಬಳಕೆ ಮಾಡಿಕೊಂಡ ಪ್ರಭುರಾಜ್‌ ಆಕೆಯ ಮೊಬೈಲ್‌ ರಿಪೇರಿ ಮಾಡಿಸಿಕೊಟ್ಟು ಅನಂತರ ಪಶ್ಚಿಮ ಬಂಗಾಲದಲ್ಲಿರುವ ಯುವತಿಯ ಸಹೋದರಿಗೆ ಕರೆ ಮಾಡಿ ರೈಲು ಟಿಕೆಟ್‌ಗೆ 2 ಸಾವಿರ ರೂ. ಗೂಗಲ್‌ ಪೇ ಮಾಡಿಸಿಕೊಂಡಿದ್ದ. ಬಳಿಕ ಆತ ಪಶ್ಚಿಮ ಬಂಗಾಲದ ರೈಲು ತಡವಾಗಿದೆ ಎಂದು ನಂಬಿಸಿ 5-6 ಗಂಟೆಗಳ ಕಾಲ ರಿಕ್ಷಾದಲ್ಲೇ ತಿರುಗಿಸಿ ಮತ್ತು ಬರುವ ಪಾನೀಯ ಕುಡಿಸಿ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

19 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago