Featured

ಉಳ್ಳಾಲ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ;  ಆರೋಪಿಗಳು 4 ದಿನ ಪೊಲೀಸ್‌ ಕಸ್ಟಡಿಗೆ – vishwanews24

ಉಳ್ಳಾಲ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ;  ಆರೋಪಿಗಳು 4 ದಿನ ಪೊಲೀಸ್‌ ಕಸ್ಟಡಿಗೆ

ಉಳ್ಳಾಲ: ಮುನ್ನೂರು ಗ್ರಾಮದ ನೇತ್ರಾವತಿ ನದಿ ತಟದ ಬಂಗ್ಲೆ ಹೌಸ್‌ ಬಳಿ ಪಶ್ಚಿಮ ಬಂಗಾಲ ಮೂಲದ ಯುವತಿಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಸಂತ್ರಸ್ತೆ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಶನಿವಾರ ಯುವತಿಯನ್ನು ಅತ್ಯಾಚಾರ ಮಾಡಲಾಗಿದೆಯಾ ಎನ್ನುವ ವೈದ್ಯಕೀಯ ವರದಿ ಪೊಲೀಸರ ಕೈ ಸೇರಲಿದೆ. ಘಟನೆ ನಡೆದ 24 ಗಂಟೆಯೊಳಗೆ ರಿಕ್ಷಾ ಚಾಲಕ ಮೂಲ್ಕಿ ಮೂಲದ ಪ್ರಭುರಾಜ್‌, ಕುಂಪಲದ ಮಿಥುನ್‌ ಮತ್ತು ಪಡೀಲ್‌ನ ಮಣಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಸಂತ್ರಸ್ತ ಯುವತಿ 3-4 ತಿಂಗಳ ಹಿಂದೆ ಪ್ರಿಯತಮನ ಜತೆಗೆ ಊರು ಬಿಟ್ಟು ಆತನ ಜತೆಗೆ ಕೇರಳ ಕಡೆಗೆ ಕೆಲಸಕ್ಕೆ ಬಂದಿದ್ದಳು. ಎ. 17ರಂದು ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಪ್ರಿಯತಮ ಮೊಬೈಲನ್ನು ಒಡೆದು ಹಾಕಿ ಮನೆಯಿಂದ ಹೊರ ಹಾಕಿದ್ದ. ಇದರಿಂದ ನೊಂದ ಯುವತಿ ಕೇರಳದಿಂದ ಮಂಗಳೂರಿಗೆ ಬರುವ ರೈಲು ಹತ್ತಿದ್ದಳು. ಮಂಗಳೂರಿನಲ್ಲಿ ಇಳಿದವಳಿಗೆ ಮೊಬೈಲ್‌ ರಿಪೇರಿ ವಿಚಾರದಲ್ಲಿ ರಿಕ್ಷಾ ಚಾಲಕ ಪ್ರಭುರಾಜ್‌ ಜತೆಗೆ ಮಾತನಾಡಿದ್ದು, ಹಣವಿಲ್ಲದ ಕಾರಣ ಊರಿಗೆ ತೆರಳಲು ಸಹಕರಿಸುವಂತೆ ಕೇಳಿಕೊಂಡಿದ್ದಳು.

ಅದನ್ನೇ ದುರ್ಬಳಕೆ ಮಾಡಿಕೊಂಡ ಪ್ರಭುರಾಜ್‌ ಆಕೆಯ ಮೊಬೈಲ್‌ ರಿಪೇರಿ ಮಾಡಿಸಿಕೊಟ್ಟು ಅನಂತರ ಪಶ್ಚಿಮ ಬಂಗಾಲದಲ್ಲಿರುವ ಯುವತಿಯ ಸಹೋದರಿಗೆ ಕರೆ ಮಾಡಿ ರೈಲು ಟಿಕೆಟ್‌ಗೆ 2 ಸಾವಿರ ರೂ. ಗೂಗಲ್‌ ಪೇ ಮಾಡಿಸಿಕೊಂಡಿದ್ದ. ಬಳಿಕ ಆತ ಪಶ್ಚಿಮ ಬಂಗಾಲದ ರೈಲು ತಡವಾಗಿದೆ ಎಂದು ನಂಬಿಸಿ 5-6 ಗಂಟೆಗಳ ಕಾಲ ರಿಕ್ಷಾದಲ್ಲೇ ತಿರುಗಿಸಿ ಮತ್ತು ಬರುವ ಪಾನೀಯ ಕುಡಿಸಿ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago