Featured

ಉಳ್ಳಾಲ: ಯುವತಿ ಸಾವಿಗೆ ಟ್ವಿಸ್ಟ್ – ಮಹಿಳೆಯಿಂದ ಮೋಸ; ಗೃಹಪ್ರವೇಶದಂದೇ ಬಂದಿದ್ದ ಬ್ಯಾಂಕ್ ಸೀಝರ್‌ಗಳು ! Vishwanews24

ಉಳ್ಳಾಲ: ಯುವತಿ ಸಾವಿಗೆ ಟ್ವಿಸ್ಟ್ – ಮಹಿಳೆಯಿಂದ ಮೋಸ; ಗೃಹಪ್ರವೇಶದಂದೇ ಬಂದಿದ್ದ ಬ್ಯಾಂಕ್ ಸೀಝರ್‌ಗಳು !

ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾದ ಯುವತಿ ಮನನೊಂದು ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 15 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ.

ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿನಗರ ನಿವಾಸಿ ಅಶ್ವಿನಿ ಬಂಗೇರ (25) ಆತ್ಮಹತ್ಯೆಗೈದ ಯುವತಿ. ದುಬೈನಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಕೆಲ ದಿನಗಳ ಹಿಂದಷ್ಟೇ ಊರಿಗೆ ಆಗಮಿಸಿದ್ದಳು. ದುಬೈ ಕೆಲ¸ದಲ್ಲಿದ್ದ ಸಂದರ್ಭ ಸಂಗೀತಾ ಎಂಬ ಮಹಿಳೆಯ ಪರಿಚಯವಾಗಿದ್ದು, ಇದರಿಂದ ಸಂಗೀತಾ ಪ್ರಸ್ತಾಪಿಸಿದಂತೆ ಕುಂಪಲ ಚಿತ್ರಾಂಜಲಿನಗರದಲ್ಲಿರುವ ಮನೆಯನ್ನು ಖರೀದಿಸುವುದಾಗಿ ವಿಶ್ವಾಸ ನೀಡಿದ್ದರು. ಅದರಂತೆ ಬ್ಯಾಂಕ್ ಸಾಲ ಮರುಪಾವತಿಯಾದ ತಕ್ಷಣ ಅಶ್ವಿನಿ ಹೆಸರಿಗೆ ಮನೆಯನ್ನು ನೋಂದಾವಣಿ ಮಾಡಿಕೊಡುವುದಾಗಿಯೂ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಮನೆಗೆಂದು ಬ್ಯಾಂಕಿನಿಂದ ಸಂಗೀತಾ ರೂ. 18 ಲಕ್ಷ ಮರುಪಾವತಿ ಬಾಕಿಯಿತ್ತು. ಅದಕ್ಕಾಗಿ ಅಶ್ವಿನಿಗೆ ಮನೆ ನೀಡುವುದಾಗಿ ಮುಂಚಿತವಾಗಿ ರೂ. 7 ಲಕ್ಷ ನಗದು ಪಡೆದು, ನಂತರ 8 ತಿಂಗಳ ಕಾಲ ರೂ.17,000 ಇಎಂಐ ಆಕೆಯ ಬಳಿ ಪಾವತಿಸಿದ್ದಳು. ಜೂ. 5 ರಂದು ಚಿತ್ರಾಂಜಲಿನಗರದಲ್ಲಿ ಸಂಬಂಧಿಕರ, ಗೆಳೆಯರ ಸಮ್ಮುಖದಲ್ಲಿ ಅದ್ಧೂರಿಯಾಗಿ ಗೃಹಪ್ರವೇಶ ನಡೆದಿತ್ತು. ನೆಂಟರು ಮನೆಯಲ್ಲಿರುವ ಸಂದರ್ಭ ಸಂಜೆ ವೇಳೆ ಸಂಗೀತಾ ಸಾಲ ಪಡೆದಿದ್ದ ಬ್ಯಾಂಕ್ ಸಿಬ್ಬಂದಿ ಸೀಝರ್ ಗಳು ಮನೆಗೆ ಆಗಮಿಸಿದ್ದು, ಮನೆಮಂದಿಯನ್ನು ಲೋನ್ ಪಾವತಿಸದೇ ಇದ್ದಲ್ಲಿ ಮನೆಯನ್ನು ಹರಾಜು ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ಅಲ್ಲದೆ ಕಳೆದ 1 ವರ್ಷದಿಂದ ಇಎಂಐ ಪಾವತಿಸದೇ ಇರುವುದನ್ನು ತಿಳಿಸಿ ತೆರಳಿದ್ದರು. ನೆಂಟರ ಮುಂದೆ ತನ್ನ ಸಾಧನೆಯನ್ನು ತೋರಿಸುವ ಹಂತದಲ್ಲಿಯೇ ಮರ್ಯಾದೆ ಹೋಯಿತೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು. ಜೂ.8 ರಂದು ಬ್ಯಾಂಕ್ ಗೆ ಬರುವಂತೆ ಅಶ್ವಿನಿಗೆ ಸಿಬ್ಬಂದಿ ತಿಳಿಸಿ ತೆರಳಿದ್ದರು. ಇದರಿಂದ ಇನ್ನಷ್ಟು ಖಿನ್ನತೆಗೆ ಜಾರಿದ್ದ ಅಶ್ವಿನಿ ಇಂದು ಬ್ಯಾಂಕ್ ಕಚೇರಿಗೆ ತೆರಳಬೇಕು ಅನ್ನುವ ಚಿಂತೆಯಿಂದಲೇ ರಾತ್ರಿಯಿಡೀ ಮನೆಯ ಕೋಣೆಯೊಳಗೆ ಕುಳಿತು 15 ಪುಟಗಳ ಡೆತ್ ನೋಟ್ ಬರೆದಿಟ್ಟು ಫ್ಯಾನಿಗೆ ಕೊರಳೊಡ್ಡಿ ಆತ್ಮಹತ್ಯೆ ನಡೆಸಿಕೊಂಡಿದ್ದಾಳೆ.

ತುಳು ಭಾಷೆಯಲ್ಲಿ ಇಂಗ್ಲೀಷ್ ಪದಗಳ ಮೂಲಕ ಬರೆದಿಟ್ಟಿರುವ ಡೆತ್‍ನೋಟ್‍ನಲ್ಲಿ ತನ್ನ ಸಾವಿಗೆ ತಾನೇ ಕಾರಣ , ಡೆತ್ ನೋಟ್ ಪೊಲೀಸರು ಕೇವಲ ಓದಿದರೆ ಸಾಕು ತನಿಖೆ ನಡೆಸಬೇಕಿಲ್ಲ. ಸಂಗೀತಾ ಅನ್ನುವ ಮಹಿಳೆಯಿಂದ ವಂಚನೆಗೊಳಗಾದ ಕುರಿತು ಉಲ್ಲೇಖಿಸಿದ್ದು, ನಿಖಿಲ್ ಐ ಲವ್ ಯೂ, ತನ್ನ ಬಳಿಯಿರುವ ಐಫೋನ್ ಅನ್ನು ಆತನಿಗೆ ನೀಡಿ ಎಂದು ಕೊನೆಯಲ್ಲಿ ಬರೆದಿಟ್ಟುಕೊಂಡಿದ್ದಾಳೆ.

ಮಗಳ ಸಾವಿಗೆ ಆಕೆಯ ಸ್ನೇಹಿತರೇ ಕಾರಣ:
ಮಗಳ ಸಾವಿನಿಂದ ನೊಂದಿರುವ ತಾಯಿ ದೇವಕಿ, ಮಗಳ ಸಾವಿಗೆ ಆಕೆಯ ಸ್ನೇಹಿತರೇ ಕಾರಣ ಎಂದು ಮಾಧ್ಯಮಗಳೊಂದಿಗೆ ತಿಳಿಸಿದ್ದಾರೆ. ಸೋಮೇಶ್ವರ ನಿಖಿಲ್, ಇಬ್ಬರು ಯುವತಿಯರು ಅಶ್ವಿನಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದರು. ಗೃಹಪ್ರವೇಶ ನಡೆದ ನಂತರವೂ ಮನೆಯ ತಾರಸಿನಲ್ಲಿ ಕುಳಿತು ಸಿಗರೇಟು ಪಾರ್ಟಿ ಮಾಡಿ, ಮಗಳನ್ನೂ ಹಾಳು ಮಾಡುತ್ತಿದ್ದರು. ಸ್ನೇಹಿತರೇ ಆಕೆಗೆ ಮುಖ್ಯವಾಗಿತ್ತು, ತಾಯಿಯ ನೆನಪೇ ಇರಲಿಲ್ಲ. ದುಬೈಯಿಂದ ಬರುವ ವಿಚಾರವೂ ತನಗೆ ಗೊತ್ತಿರಲಿಲ್ಲ. ಸ್ನೇಹಿತರಿಗೆ ತಿಳಿದಿತ್ತು. ಮನೆ ಖರೀದಿಸಿರುವ ವಿಚಾರವೂ ಗಮನಕ್ಕೆ ಬಂದಿರಲಿಲ್ಲ. ಇದೀಗ ಮನೆಯ ಸಾಲವೇ ಆಕೆಯನ್ನು ಮುಗಿಸಿದ್ದು, ತನ್ನನ್ನು ಅನಾಥಳನ್ನಾಗಿ ಮಾಡಿ ಹೋಗಿದ್ದಾಳೆ ಎಂದಿದ್ದಾರೆ.

ಡೆತ್ ನೋಟಲ್ಲಿ ಇರುವಂತೆ ಯಾರ ವಿರುದ್ಧವೂ ಕ್ರಮಕೈಗೊಳ್ಳುವ ಹಾಗಿಲ್ಲ. ತಾಯಿ ದೇವಕಿ ಒಂದು ವೇಳೆ ವಂಚಿಸಿದ ಸಂಗೀತಾ ಹಾಗೂ ಗೃಹಪ್ರವೇಶದಂದೇ ಮನೆಗೆ ಬಂದಿದ್ದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೂರು ನೀಡಿದಲ್ಲಿ ಆತ್ಮಹತ್ಯೆ ಪ್ರಚೋದನೆ ದಾಖಲಿಸಬಹುದು. ಈವರೆಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ ಎಂದು ಉಳ್ಳಾಲ ಠಾಣಾಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

40 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

23 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 hours ago