ಉಳ್ಳಾಲ: ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ, ಸ್ವಿಗ್ಗಿ ಡೆಲಿವರಿ ಬಾಯ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ.66 ರ ಸಂಕೊಳಿಗೆ ಸಮೀಪ ಡಿ.31ರ ಮಂಗಳವಾರ ಸಂಭವಿಸಿದೆ.
ದೇರಳಕಟ್ಟೆ ಪಾನೀರು ನಿವಾಸಿ ಉಮ್ಮರ್ ಫಾರುಕ್ ಯಾನೆ ಅಝರ್ (31) ಸಾವನ್ನಪ್ಪಿದವರು.
ಅವಿವಾಹಿತರಾಗಿರುವ ಇವರು ಸ್ವಿಗ್ಗಿ ಡೆಲಿವರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಡಿ.31ರ ತಡರಾತ್ರಿ ತಲಪಾಡಿಯಿಂದ ಡೆಲಿವರಿ ತಲುಪಿಸಿ ತೊಕ್ಕೊಟ್ಟು ಕಡೆಗೆ ವಾಪಸ್ಸಾಗುವ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದರು. ಬಳಿಕ ಅದೇ ಲಾರಿಯ ಹಿಂಬದಿ ಚಕ್ರಗಳು ಅವರ ಮೇಲೆ ಚಲಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…