Featured

ಉಳ್ಳಾಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ : ಪವಾಡಸದೃಶವಾಗಿ  ಪಾರಾದ ವೈದ್ಯಕೀಯ ವಿದ್ಯಾರ್ಥಿಗಳು – Vishwanews24

ಉಳ್ಳಾಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ : ಪವಾಡಸದೃಶವಾಗಿ  ಪಾರಾದ ವೈದ್ಯಕೀಯ ವಿದ್ಯಾರ್ಥಿಗಳು

ಉಳ್ಳಾಲ: ಕಾರೊಂದು ವಿದ್ಯುತ್‌ ಕಂಬಕ್ಕೆ ಬಡಿದು ರಸ್ತೆ ಬದಿಯಲ್ಲಿ ಹಾಕಿದ್ದ ಕಬ್ಬಿಣ ತಡೆಬೇಲಿಗೆ ಸಿಲುಕಿ ತಲೆಕೆಳಗಾಗಿ ನಿಂತ ಘಟನೆ ತೊಕ್ಕೊಟ್ಟು ಬಬ್ಬುಕಟ್ಟೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಈ ಕಾರು ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪವಾಡಸದೃಶವಾಗಿ ಪಾರಾಗಿದ್ದಾರೆ. ಅಪಘಾತದಿಂದ ಎಚ್‌.ಟಿ. ಲೈನ್‌ ವಿದ್ಯುತ್‌ ಕಂಬ ಮುರಿದು ಬಿದ್ದಿದೆ. ಅಪಘಾತದಿಂದಾಗಿ ಈ ಪರಿಸರದ ಜನರಿಗೆ ಭಾನುವಾರ ಮಧ್ಯಾಹ್ನದವರೆಗೆ ವಿದ್ಯುತ್‌ ಸರಬರಾಜು ಕಡಿತಗೊಂಡಿತ್ತು.

ಕಾರಿನಲ್ಲಿ ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ತೊಕ್ಕೊಟ್ಟು ಕಡೆಯಿಂದ ದೇರಳಕಟ್ಟೆಗೆ ಸಾಗುತ್ತಿದ್ದಾಗ ಟಿಪ್ಪರ್‌ ಒಂದನ್ನು ಓವರ್‌ಟೇಕ್‌ ಮಾಡುವ ಸಂದರ್ಭಟಿಪ್ಪರ್‌ ಚಾಲಕ ಲಾರಿಯನ್ನು ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ಅಪಘಾತದಿಂದ ತಪ್ಪಿಸಲು ಕಾರಿನ ಚಾಲಕ ಎಡಕ್ಕೆ ತಿರುಗಿಸಿದ್ದಾನೆ.

ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌ ಕಂಬಕ್ಕೆ ಬಡಿದು ರಸ್ತೆ ಬದಿಯಲ್ಲಿ ಹಾಕಿದ್ದ ಕಬ್ಬಿಣ ತಡೆಬೇಲಿಗೆ ಸಿಲುಕಿ ತಲೆಕೆಳಗಾಗಿ ನಿಂತಿದೆ. ಇನ್ನು ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago