Featured

ಉಳ್ಳಾಲ: ಶಾಲಾ ಬಸ್ಸಿಗೆ ಮೀನಿನ ಕ್ಯಾಂಟರ್ ಡಿಕ್ಕಿ : 7 ವಿದ್ಯಾರ್ಥಿಗಳಿಗೆ ಗಾಯ – vishwanews24

ಉಳ್ಳಾಲ: ಶಾಲಾ ಬಸ್ಸಿಗೆ ಮೀನಿನ ಕ್ಯಾಂಟರ್ ಡಿಕ್ಕಿ : 7 ವಿದ್ಯಾರ್ಥಿಗಳಿಗೆ ಗಾಯ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕಾಪಿಕಾಡು ಬಳಿ ಇಂದು ಬೆಳಿಗ್ಗೆ ಸುಮಾರು 8 ಗಂಟೆ ಸುಮಾರಿಗೆ ಶಾಲಾ ಬಸ್ಸಿನ ಹಿಂಭಾಗಕ್ಕೆ ಮೀನು ಸಾಗಾಟದ ಕ್ಯಾಂಟರ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.

ತಲಪಾಡಿಯ ಶಾರದಾ ನಿಕೇತನ ಪಬ್ಲಿಕ್ ಸ್ಕೂಲ್ & ಕಾಲೇಜಿಗೆ ಸೇರಿದ ಬಸ್ಸು ಹೆದ್ದಾರಿ ಅಂಚಿನಲ್ಲಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ತಲಪಾಡಿ ಕಡೆಗೆ ತೆರಳುತ್ತಿದ್ದ ವೇಳೆ, ಹಿಂದಿನಿಂದ ಬಂದ ಮೀನಿನ ಕ್ಯಾಂಟರ್ ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.

ಗೋವಾದಿಂದ ಕೇರಳ ಕಡೆಗೆ ಮೀನು ಸಾಗಿಸುತ್ತಿದ್ದ ಕುಂದಾಪುರ ಮೂಲದ ಚಾಲಕ ಸಂಜೀವ ನಿದ್ರಾಮಂಪರಿನಲ್ಲಿ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ:

ಘಟನೆಯಲ್ಲಿ ಬಸ್ಸಿನಲ್ಲಿದ್ದ ನಾಲ್ಕು ವಿದ್ಯಾರ್ಥಿಗಳು ಹಾಗೂ ಮೂರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳಿಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ. ಕಾಲಿಗೆ ಗಾಯಗೊಂಡ ವಿದ್ಯಾರ್ಥಿಯೊಬ್ಬರನ್ನು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸಿದ ವೇಳೆ ಬಸ್ಸಿನಲ್ಲಿ ಒಟ್ಟು 24 ಮಂದಿ ವಿದ್ಯಾರ್ಥಿಗಳು ಇದ್ದರು. ಹೆಚ್ಚಿನ ಅಪಾಯ ತಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ:

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

21 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago