ಉಳ್ಳಾಲ : ಅಕ್ರಮ ಮರಳುಗಾರಿಕೆ ಕಣ್ಗಾವಲಿಗೆ ಜಿಲ್ಲಾಡಳಿತ ಹಾಕಿದ್ದ ಸಿಸಿ ಕ್ಯಾಮರಾ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್ (32) ಎಂದು ಗುರುತಿಸಲಾಗಿದೆ. ಅವರು ಎರಡು ದಿನಗಳ ಹಿಂದೆ ಸೋಮೇಶ್ವರದಲ್ಲಿ ಮರಳು ಸಾಗಾಟ ಮಾಡುವ ಉದ್ದೇಶದಿಂದ ಸಿಸಿ ಕ್ಯಾಮರಾ ಕ್ಕೆ ಹಾನಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ರಮ ಮರಳು ಸಾಗಾಟ ತಡೆಯುವುದಕ್ಕಾಗಿ ದ.ಕ. ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿ ಕ್ಯಾಮರಾ ಅಳವಡಿಸಿತ್ತು. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಲಾರಿಯಿಂದ ಢಿಕ್ಕಿ ಹೊಡೆದು ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…