ಮಂಗಳೂರು : ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಯಲ್ಲಿ ಆತ್ಮಹತ್ಯೆಯಂತಹ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ತಡೆಯಲು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಅಲ್ಲಿ ಎರಡು ಸೇತುವೆಗಳಿದ್ದು ಎರಡಕ್ಕೂ ಸೂಕ್ತ ವ್ಯವಸ್ಥೆ ಮಾಡಬೇಕಿದೆ. ಎರಡೂ ಸೇತುವೆಗಳ ನಾಲ್ಕು ಬದಿಗಳಲ್ಲಿಯೂ ಕನಿಷ್ಟ 5 ರಿಂದ 6 ಅಡಿಗಳಷ್ಟು ಎತ್ತರದ ಗ್ರೀಲ್ ಹಾಕಿ ಫೈಬರ್ ತಡೆಗೋಡೆಯ ತರಹ ವ್ಯವಸ್ಥೆ ಮಾಡಿದರೆ ಅದು ಆತ್ಮಹತ್ಯೆಗೆ ಮುಂದಾಗುವವರಿಗೆ ತೊಡಕಾಗಲಿದೆ. ಇನ್ನು ಪಾರದರ್ಶಕ ಗೋಡೆ ತರಹದ ವ್ಯವಸ್ಥೆಯಿಂದ ನದಿಯ ಸೌಂದರ್ಯಕ್ಕೂ ದಕ್ಕೆ ಆಗುವುದಿಲ್ಲ ಎಂದು ಶಾಸಕರು ಸಲಹೆ ನೀಡಿದ್ದಾರೆ.
ಹಾಗೆ ಎರಡೂ ಸೇತುವೆಗಳ ಆಯಕಟ್ಟಿನ ಜಾಗಗಳಲ್ಲಿ ಸಿಸಿಕ್ಯಾಮೆರಾಗಳನ್ನು ಅಳವಡಿಸುವುದರಿಂದ ಅಹಿತಕರ ಘಟನೆ ನಡೆಯುವುದನ್ನು ತಡೆಯಲು ಸಹಕಾರಿಯಾಗಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಎರಡೂ ಕಾಮಗಾರಿಗಳಿಗೆ ಕ್ರಿಯಾಯೋಜನೆಯನ್ನು ತಯಾರಿಸಲು ಶಾಸಕರು ತಿಳಿಸಿದ್ದು ಮುಂದಿನ ಕೆಲ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಆದರೆ ಆತ್ಮಹತ್ಯೆ ಮಾಡುವುದು ಸಮಸ್ಯೆಗೆ ಪರಿಹಾರ ಅಲ್ಲ ಎಂದು ಯುವಜನಾಂಗ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆಯ ನಂತರ ಕೆಲವೇ ದಿನಗಳಲ್ಲಿ ನಾಲ್ಕು ಜನ ಅಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಅದರಲ್ಲಿ ಒಬ್ಬರು ಬದುಕಿ ಉಳಿದಿದ್ದಾರೆ. ಭವಿಷ್ಯದಲ್ಲಿ ನೇತ್ರಾವತಿ ಸೇತುವೆಗೆ ಸೂಸೈಡ್ ಪಾಯಿಂಟ್ ಎನ್ನುವ ಹಣೆಪಟ್ಟಿ ಬರದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ಕಾಮತ್ ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…