Featured

ಉಳ್ಳಾಲ ಸೇತುವೆಯಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಸೇತುವೆಗೆ ಸಿಸಿ ಕ್ಯಾಮೆರಾ, ಎತ್ತರದ ಗ್ರೀಲ್ ಅಳವಡಿಸಲು ಜಿಲ್ಲಾಧಿಕಾರಿಯೊಂದಿಗೆ ಶಾಸಕ ಕಾಮತ್ ಚರ್ಚೆ -Vishwanews24

ಮಂಗಳೂರು : ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಯಲ್ಲಿ ಆತ್ಮಹತ್ಯೆಯಂತಹ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ತಡೆಯಲು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಅಲ್ಲಿ ಎರಡು ಸೇತುವೆಗಳಿದ್ದು ಎರಡಕ್ಕೂ ಸೂಕ್ತ ವ್ಯವಸ್ಥೆ ಮಾಡಬೇಕಿದೆ. ಎರಡೂ ಸೇತುವೆಗಳ ನಾಲ್ಕು ಬದಿಗಳಲ್ಲಿಯೂ ಕನಿಷ್ಟ 5 ರಿಂದ 6 ಅಡಿಗಳಷ್ಟು ಎತ್ತರದ ಗ್ರೀಲ್ ಹಾಕಿ ಫೈಬರ್ ತಡೆಗೋಡೆಯ ತರಹ ವ್ಯವಸ್ಥೆ ಮಾಡಿದರೆ ಅದು ಆತ್ಮಹತ್ಯೆಗೆ ಮುಂದಾಗುವವರಿಗೆ ತೊಡಕಾಗಲಿದೆ. ಇನ್ನು ಪಾರದರ್ಶಕ ಗೋಡೆ ತರಹದ ವ್ಯವಸ್ಥೆಯಿಂದ ನದಿಯ ಸೌಂದರ್ಯಕ್ಕೂ ದಕ್ಕೆ ಆಗುವುದಿಲ್ಲ ಎಂದು ಶಾಸಕರು ಸಲಹೆ ನೀಡಿದ್ದಾರೆ.

ಹಾಗೆ ಎರಡೂ ಸೇತುವೆಗಳ ಆಯಕಟ್ಟಿನ ಜಾಗಗಳಲ್ಲಿ ಸಿಸಿಕ್ಯಾಮೆರಾಗಳನ್ನು ಅಳವಡಿಸುವುದರಿಂದ ಅಹಿತಕರ ಘಟನೆ ನಡೆಯುವುದನ್ನು ತಡೆಯಲು ಸಹಕಾರಿಯಾಗಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಎರಡೂ ಕಾಮಗಾರಿಗಳಿಗೆ ಕ್ರಿಯಾಯೋಜನೆಯನ್ನು ತಯಾರಿಸಲು ಶಾಸಕರು ತಿಳಿಸಿದ್ದು ಮುಂದಿನ ಕೆಲ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಆದರೆ ಆತ್ಮಹತ್ಯೆ ಮಾಡುವುದು ಸಮಸ್ಯೆಗೆ ಪರಿಹಾರ ಅಲ್ಲ ಎಂದು ಯುವಜನಾಂಗ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆಯ ನಂತರ ಕೆಲವೇ ದಿನಗಳಲ್ಲಿ ನಾಲ್ಕು ಜನ ಅಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಅದರಲ್ಲಿ ಒಬ್ಬರು ಬದುಕಿ ಉಳಿದಿದ್ದಾರೆ. ಭವಿಷ್ಯದಲ್ಲಿ ನೇತ್ರಾವತಿ ಸೇತುವೆಗೆ ಸೂಸೈಡ್ ಪಾಯಿಂಟ್ ಎನ್ನುವ ಹಣೆಪಟ್ಟಿ ಬರದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ಕಾಮತ್ ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

13 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

13 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago