ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ.
ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ತೆರಳಿದವರು, ಜಪ್ಪಿನ ಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ತೊಕ್ಕೊಟ್ಟು ಕಡೆ ಬರುವಾಗ ಈ ಅವಘಡ ಸಂಭವಿಸಿದೆ.
ತೊಕ್ಕೊಟ್ಟು ಜಂಕ್ಷನ್ ಬದಲು ಕೋಟೆಕಾರು ಬೀರಿವರೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಸುಮಾ ಉರುಳಿ ಬಿದ್ದಿದ್ದಾರೆ.
ತಕ್ಷಣ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…