ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ.
ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ತೆರಳಿದವರು, ಜಪ್ಪಿನ ಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ತೊಕ್ಕೊಟ್ಟು ಕಡೆ ಬರುವಾಗ ಈ ಅವಘಡ ಸಂಭವಿಸಿದೆ.
ತೊಕ್ಕೊಟ್ಟು ಜಂಕ್ಷನ್ ಬದಲು ಕೋಟೆಕಾರು ಬೀರಿವರೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಸುಮಾ ಉರುಳಿ ಬಿದ್ದಿದ್ದಾರೆ.
ತಕ್ಷಣ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…