ಉಳ್ಳಾಲ: : ಉಳ್ಳಾಲದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡಮ್ ಮತ್ತು ನಿಂದನಾರ್ಹ ಬರಹಗಳುಲ್ಲ ಭಿತ್ತಿಪತ್ರವನ್ನು ಹಾಕಿ ವಿಕೃತಿ ಮೆರೆದಿದ್ದಾರೆ.
ಕೊರಗಜ್ಜ, ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಿಡಿಗೇಡಿಗಳು ಕಾಂಡೋಮ್ ಹಾಗೂ ಪ್ರಚೋದನಕಾರಿ ಬರಹ ಬರೆದು ಬಿಎಸ್ವೈ ಅವರ ಪುತ್ರ ವಿಜಯೇಂದ್ರನ ಭಾವಚಿತ್ರಕ್ಕೆ ಶಿಲುಬೆಯ ಹಾರ ಹಾಕಿ ವಿಕೃತಿಗೊಳಿಸಿರುವ ಭಿತ್ತಿಪತ್ರ ಪತ್ತೆಯಾಗಿದೆ.
ಉಳ್ಳಾಲದ ಕೊರಗಜ್ಜ ಸೇವಾ ಸಮಿತಿಯವರು ಪ್ರತಿ ತಿಂಗಳ ಸಂಕ್ರಾಂತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆ ಹೊಂದಿದ್ದು, ಈ ಬಾರಿ ಸ್ವಲ್ಪ ತಡವಾಗಿ ಅಂದರೆ ಮಂಗಳವಾರ ಸಂಜೆ ಕಾಣಿಕೆ ಡಬ್ಬಿ ತೆರೆದಿದ್ದು, ಡಬ್ಬಿಯ ಒಳಗೆ ಕಾಂಡಾಮ್ಗಳು ಹಾಗೂ ಪ್ರಚೋಧನಕಾರಿ ಬರಹಗಳು ಇದ್ದಂತಹ ಪ್ಲೆಕ್ಸ್ ಒಂದು ಕಂಡು ಬಂದಿದೆ.ಎಂ. ರುದ್ರೇಶ್ ಎಂಬವರಿಗೆ ಶುಭಕೋರಿದ ಈ ಪತ್ರದಲ್ಲಿ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಬಿಜೆಪಿ ನಾಯಕರ ಭಾವಚಿತ್ರವಿರುವ ಭಿತ್ತಿಪತ್ರವನ್ನು ವಿಕೃತಿಗೊಳಿಸಿದ್ದಾರೆ.
ಯಡಿಯೂರಪ್ಪ, ವಿಜಯೇಂದ್ರ ಅವರ ಕುತ್ತಿಗೆಗೆ ಶಿಲುಬೆ ಕ್ರಾಸನ್ನು ನೇತಾಡಿಸಿದಂತೆ ಚಿತ್ರ ಬಿಡಿಸಲಾಗಿದೆ. ಜತೆಗೆ ಪ್ರಚೋದನಕಾರಿ ಬರಹಗಳನ್ನು ಬರೆಯಲಾಗಿದೆ. ಕಿಡಿಗೇಡಿಗಳ ಕುಕೃತ್ಯಕ್ಕೆ ಭಕ್ತರ ಆಕ್ರೋಶ ವ್ಯಕ್ತವಾಗಿದ್ದು, ಕೊರಗಜ್ಜ ಸೇವಾ ಸಮಿತಿಯವರು ಈ ಬಗ್ಗೆ ಮಂಗಳವಾರ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಲು ಆಗ್ರಹಿಸಿದ್ದಾರೆ.
ಇನ್ನು ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಕೊರಗಜ್ಜ, ಗುಳಿಗಜ್ಜನ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ದ ಕ್ಷೇತ್ರದ ಕಾರಣೀಕ ಶಕ್ತಿಗಳಾದ ಗುಳಿಗಜ್ಜ ಮತ್ತು ಕೊರಗಜ್ಜ ಶಿಕ್ಷೆಸಬೇಕು ಎಂದು ಸಾಮೂಹಿಕವಾಗಿ ಪ್ರಾರ್ಥನೆ ಮಾಡಲಾಯಿತು.
http://ನಾವು ಬಿಜೆಪಿ ಪಕ್ಷದ ಮುಂದೆ ಎಂದಿಗೂ ತಲೆ ತಗ್ಗಿಸುವುದಿಲ್ಲ: ಮಮತಾ ಬ್ಯಾನರ್ಜಿ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…