Featured

ಉಳ್ಳಾಲ: 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಾರಸುದಾರರಿಗೆ ಹಿಂದಿರುಗಿಸಿದ ಯುವಕ – vishwanews24

ಉಳ್ಳಾಲ:2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಾರಸುದಾರರಿಗೆ ಹಿಂದಿರುಗಿಸಿದ ಯುವಕ

ಉಳ್ಳಾಲ: ಮದುವೆ ನಿಶ್ಚಿತಾರ್ಥ ಕಾಯಕ್ರಮದಲ್ಲಿ ಸಿಕ್ಕಿದ್ದ 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಅದರ ವಾರಸುದಾರರಿಗೆ ಮರಳಿಸಿ ಕುಂಬಳೆ ಸಮೀಪದ ಪುತ್ತಿಗೆಯ ಪಂಜಳ ನಿವಾಸಿ ವಿಜಯಕುಮಾರ್ ರೈ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವಿಜಯಕುಮಾರ್ ಅವರು ತಮಗೆ ಸಿಕ್ಕಿದ್ದ ಆಭರಣವನ್ನು ಹಿಡಿದುಕೊಂಡು ಅದರ ವಾರಸುದಾರರು ಬರಬಹುದು ಎಂದು ಎದುರು ನೋಡುತ್ತಾ ಕಾದಿದ್ದರು. ಬಳಿಕ ಅವರು ಅಂದುಕೊಂಡಂತೆಯೇ ತನ್ನ ಮಗುವಿನ ಆಭರಣವನ್ನು ಕಳೆದುಕೊಂಡಿರುವ ಕಿರಣ್ ಶೆಟ್ಟಿ ಅವರು ನಿಶ್ಚಿತಾರ್ಥ ನಡೆದಿದ್ದ ಸ್ಥಳಕ್ಕೆ ಆಗಮಿಸಿದ್ದಾರೆ. ಕಿರಣ್ ಹುಡುಕುವುದನ್ನು ಗಮನಿಸಿದ ವಿಜಯಕುಮಾರ್ ಅವರ ಅವರನ್ನು ವಿಚಾರಿಸಿ ಚಿನ್ನದ ಗುರುತನ್ನು ಕೇಳಿ ಅವರಿಗೆ ಹಸ್ತಾಂತರಿಸಿದ್ದಾರೆ.

ಈ ವೇಳೆ ಕಿರಣ್ ಶೆಟ್ಟಿ ಅವರು ವಿಜಯಕುಮಾರ್ ಅವರ ಫೋನ್ ನಂಬರ್ ಪಡೆದಿದ್ದರು. ಕಿರಣ್ ಶೆಟ್ಟಿ ಅವರು ತಾನು ಮಾರ್ಗದರ್ಶಕರಾಗಿರುವ ತಲಪಾಡಿ ಸಮೀಪದ ಕಿನ್ಯ ದುರ್ಗಾಪುರದ ಯುವಶಕ್ತಿಯ ಕಾರ್ಯಕ್ರಮವೊಂದರಲ್ಲಿ ವಿಜಯಕುಮಾರ್ ರೈ ಅವರಿಗೆ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

17 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

17 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

17 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

17 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

18 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

20 hours ago