ಉ.ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ : ಕೆ.ಸುಧಾಕರ್ ಭರವಸೆ  – Vishwanews24

Featured, ರಾಜ್ಯ ನ್ಯೂಸ್

ಉ.ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ : ಕೆ.ಸುಧಾಕರ್ ಭರವಸೆ 

ಬೆಂಗಳೂರು: ಶಿರೂರು ಟೋಲ್ ಗೇಟ್ ನಲ್ಲಿ ಇತ್ತೀಚೆಗೆ ನಡೆದ ಆಯಂಬುಲೆನ್ಸ್ ಅಪಘಾತದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎಂಬ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನಗಳು ನಡೆಯುತ್ತಿದೆ.

ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಸರ್ಕರದ ಗಮನ ಸೆಳೆಯುವ ಕೆಲಸ ಮಾಡಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಕೆ.ಸುಧಾಕರ್, ”ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದಿದ್ದಾರೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ : HDK – VIshwanews24

ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ.

Leave a Reply