ಬೆಂಗಳೂರು: ಶಿರೂರು ಟೋಲ್ ಗೇಟ್ ನಲ್ಲಿ ಇತ್ತೀಚೆಗೆ ನಡೆದ ಆಯಂಬುಲೆನ್ಸ್ ಅಪಘಾತದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎಂಬ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನಗಳು ನಡೆಯುತ್ತಿದೆ.
ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಸರ್ಕರದ ಗಮನ ಸೆಳೆಯುವ ಕೆಲಸ ಮಾಡಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಕೆ.ಸುಧಾಕರ್, ”ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…