ಲಖನೌ: ಉತ್ತರ ಪ್ರದೇಶದಾದ್ಯಂತ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದರು ಎನ್ನಲಾದ ಮುಸ್ಲಿಂ ವ್ಯಕ್ತಿಗಳ ಮನೆಗಳನ್ನು ನೆಲಸಮ ಮಾಡಲಾಗಿದೆ. ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ಅವರ ಬಗ್ಗೆ ನೀಡಿದ ‘ಅವಹೇಳನಕಾರಿ’ ಹೇಳಿಕೆಯನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಗಿದೆ. ಈ ಮನೆಗಳು ‘ಅಕ್ರಮ’ ಎಂಬ ಕಾರಣಕ್ಕೆ ಸ್ಥಳೀಯಾಡಳಿತ ಸಂಸ್ಥೆಗಳು ಮನೆ ಧ್ವಂಸ ಕಾರ್ಯಾಚರಣೆ ನಡೆಸಿವೆ.
ಪ್ರಯಾಗರಾಜ್ನಲ್ಲಿ ನಡೆದ ಪ್ರತಿಭಟನೆಯ ಪಿತೂರಿ ರೂಪಿಸಿದ ಆರೋಪ ಹೊತ್ತಿರುವ ಜಾವೇದ್ ಮಹಮ್ಮದ್ ಅವರ ಮನೆಯ ಒಂದು ಭಾಗವನ್ನು ಬುಲ್ಡೋಜರ್ ಬಳಸಿ ಭಾನುವಾರ ಉರುಳಿಸಲಾಗಿದೆ. ಈ ಮನೆಯ ಒಂದು ಭಾಗವು ‘ಅಕ್ರಮ’ ಎಂದು ಹೇಳಲಾಗಿದೆ. ಅವರಿಗೆ ಹಲವು ಬಾರಿ ನೋಟಿಸ್ ನೀಡಲಾಗಿದೆ ಎಂದು ಸ್ಥಳೀಯಾಡಳಿತ ಹೇಳಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಕ್ಕೆ ಸಂಬಂಧಿಸಿದ ಸಾಹಿತ್ಯ, ಬಾವುಟ ಸೇರಿ ‘ಆಕ್ಷೇಪಾರ್ಹ’ವಾದ ಕೆಲವು ವಸ್ತುಗಳು ಜಾವೇದ್ ಮನೆಯಲ್ಲಿ ಸಿಕ್ಕಿವೆ ಎಂದು ಪೊಲೀಸರು ಹೇಳಿದ್ದಾರೆ.
ಕಾನ್ಪುರ ಮತ್ತು ಸಹಾರನ್ಪುರದಲ್ಲಿ ಕೂಡ ಪ್ರತಿಭಟನಕಾರರಲ್ಲಿ ಕೆಲವರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ‘ಸಿ.ಸಿ.ಟಿ.ವಿ ಕ್ಯಾಮರಾ ದೃಶ್ಯಗಳ ಆಧಾರದಲ್ಲಿ ಪ್ರತಿಭಟನಕಾರರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಪ್ರತಿಭಟನಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆದ ಪ್ರಯಾಗರಾಜ್, ಸಹಾರನ್ಪುರ, ಮೊರಾದಾಬಾದ್, ಹಾಥರಸ್, ಕಾನ್ಪುರ ಮತ್ತು ಇತರ ಸ್ಥಳಗಳಲ್ಲಿ ಇನ್ನಷ್ಟು ಮನೆಗಳನ್ನು ಉರುಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ‘ಗಲಭೆಕೋರ’ರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…