Featured

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ : ಶೋಭಾ ಕರಂದ್ಲಾಜೆ – Vishwanews24

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ : ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಗಳನ್ನು ಮಾಡುತ್ತಿದ್ದಾರೆ. ಎಂಇಎಸ್ ಪುಂಡಾಟಿಕೆಯ ಜೊತೆ ಕಾಂಗ್ರೆಸ್ ಇರುವ ಗುಮಾನಿ ಕೂಡ ಕಾಡುತ್ತಿದೆ. ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನು ವಿಫಲಗೊಳಿಸುವ ವ್ಯವಸ್ಥಿತಿ ಷಡ್ಯಂತ್ರ ನಡೆಯುತ್ತಿದೆ, ಇದರ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಂಇಎಸ್ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ನಗರಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಿಗರು-ಮರಾಠಿಗರು ಎಂದು ಬೇಧ-ಭಾವವಿಲ್ಲ, ಅನುದಾನ ಹಾಗೂ ಯೋಜನೆಗಳನ್ನು ಇಬ್ಬರಿಗೂ ಸಮಾನವಾಗಿ ನೀಡಿದ್ದೇವೆ. ಎಲ್ಲಾ ಧರ್ಮದವರಿಗೂ ಕೊಟ್ಟಿದ್ದೇವೆ. ಹಿಂದೂ-ಮುಸ್ಲಿಂ-ಕ್ರೈಸ್ತ ಎಲ್ಲರಿಗೂ ಏಕಪ್ರಕಾರವಾಗಿ ನೀಡಿದ್ದೇವೆ ಎಂದರು.

ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರಿಗೆ ಅನ್ಯಾಯ ಮಾಡಿಲ್ಲ. ಅವರನ್ನು ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ. ಅನಾವಶ್ಯಕವಾಗಿ, ರಾಜಕೀಯ ಪ್ರೇರಿತವಾಗಿ ನಡೆಯುತ್ತಿರುವ ಗಲಭೆಗಳ ಬಗ್ಗೆ ನಾವು ಎಚ್ಚರಗೊಳ್ಳಬೇಕು. ಕನ್ನಡಿಗರು-ಮರಾಠಿಗರು, ಜಾತಿ-ಧರ್ಮ ಎಂಬುದನ್ನು ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದ್ದೇವೆ. ಈಗಾಗಲೇ ಗಲಭೆಕೋರನ್ನು ಬಂಧಿಸಿ ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇಂದು ಕೂಡ ಕಲ್ಲು ಬಿಸಾಡಿದ್ದಾರೆ. ಬಸ್‍ಗಳು ನಿಂತಿದ್ದಾವೆ ಎಂಬ ವರದಿ ಇದೆ. ಬೆಳಗಾವಿಯ ಘಟನೆಗೆ ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago