ಚಿಕ್ಕಮಗಳೂರು: ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಗಳನ್ನು ಮಾಡುತ್ತಿದ್ದಾರೆ. ಎಂಇಎಸ್ ಪುಂಡಾಟಿಕೆಯ ಜೊತೆ ಕಾಂಗ್ರೆಸ್ ಇರುವ ಗುಮಾನಿ ಕೂಡ ಕಾಡುತ್ತಿದೆ. ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನು ವಿಫಲಗೊಳಿಸುವ ವ್ಯವಸ್ಥಿತಿ ಷಡ್ಯಂತ್ರ ನಡೆಯುತ್ತಿದೆ, ಇದರ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಂಇಎಸ್ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ನಗರಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಿಗರು-ಮರಾಠಿಗರು ಎಂದು ಬೇಧ-ಭಾವವಿಲ್ಲ, ಅನುದಾನ ಹಾಗೂ ಯೋಜನೆಗಳನ್ನು ಇಬ್ಬರಿಗೂ ಸಮಾನವಾಗಿ ನೀಡಿದ್ದೇವೆ. ಎಲ್ಲಾ ಧರ್ಮದವರಿಗೂ ಕೊಟ್ಟಿದ್ದೇವೆ. ಹಿಂದೂ-ಮುಸ್ಲಿಂ-ಕ್ರೈಸ್ತ ಎಲ್ಲರಿಗೂ ಏಕಪ್ರಕಾರವಾಗಿ ನೀಡಿದ್ದೇವೆ ಎಂದರು.
ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರಿಗೆ ಅನ್ಯಾಯ ಮಾಡಿಲ್ಲ. ಅವರನ್ನು ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ. ಅನಾವಶ್ಯಕವಾಗಿ, ರಾಜಕೀಯ ಪ್ರೇರಿತವಾಗಿ ನಡೆಯುತ್ತಿರುವ ಗಲಭೆಗಳ ಬಗ್ಗೆ ನಾವು ಎಚ್ಚರಗೊಳ್ಳಬೇಕು. ಕನ್ನಡಿಗರು-ಮರಾಠಿಗರು, ಜಾತಿ-ಧರ್ಮ ಎಂಬುದನ್ನು ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದ್ದೇವೆ. ಈಗಾಗಲೇ ಗಲಭೆಕೋರನ್ನು ಬಂಧಿಸಿ ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇಂದು ಕೂಡ ಕಲ್ಲು ಬಿಸಾಡಿದ್ದಾರೆ. ಬಸ್ಗಳು ನಿಂತಿದ್ದಾವೆ ಎಂಬ ವರದಿ ಇದೆ. ಬೆಳಗಾವಿಯ ಘಟನೆಗೆ ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…