Featured

ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ : ಪಿಸಿಸಿಎಫ್ ತಂಡದ ತನಿಖೆಗೆ ಈಶ್ವರ ಖಂಡ್ರೆ ಆದೇಶ – vishwanews24

ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ : ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ

ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.

ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಿ. ಹುಲಿ ಹಂತಕರನ್ನು ಪತ್ತೆ ಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

5 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

8 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

8 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

9 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

9 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

9 hours ago