Featured

ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ 7 ಕೋಟಿ ರೂಪಾಯಿ ವಂಚನೆ ;ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ – Vishwanews24

ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ 7 ಕೋಟಿ ರೂಪಾಯಿ ವಂಚನೆ ;ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ

ಬೆಂಗಳೂರು: ಬೈಂದೂರಿನ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಆಕೆಯ ಸಹಚರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಖಚಿತ ಮಾಹಿತಿಯನ್ವಯ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು‌ ತಿಳಿದುಬಂದಿದೆ.

ಚೈತ್ರಾ ಕುಂದಾಪುರ ಜೊತೆಗೆ ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬಾತನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಗಗನ್ ಕಡೂರು, ಪ್ರಸಾದ್ ಸಹಿತ ಒಟ್ಟು ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago