ಮುಂಬೈ: ಮಹಾರಾಷ್ಟ್ರ ಸರ್ಕಾರದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ನಾರಾಯಣ ರಾಣೆ ಅವರಿಗೆ ಸ್ಥಳೀಯ ಕೋರ್ಟ್ ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಮೇಲೆ ಕೆಸರು ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧುದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ನಿತೇಶ್ ರಾಣೆ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ.
ಇದನ್ನೂ ಓದಿ:
ನ್ಯಾಯಾಲಯ ಒಂದು ತಿಂಗಳ ಜೈಲು ಶಿಕ್ಷೆಯ ಜೊತೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಈ ಮೊತ್ತದಲ್ಲಿ 50 ಸಾವಿರ ರೂ.ಗಳನ್ನು ಸಂತ್ರಸ್ತ ಎಂಜಿನಿಯರ್ಗೆ ಪರಿಹಾರವಾಗಿ ನೀಡಲು ಆದೇಶಿಸಿದೆ. ಶಾಸಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಮತ್ತು ಸಾರ್ವಜನಿಕ ಸೇವಕರ ಘನತೆಗೆ ಧಕ್ಕೆ ತರುವಂತೆ ವರ್ತಿಸಬಾರದು ತೀರ್ಪಿನಲ್ಲಿ ಉಲ್ಲೇಖಿಸಿದೆ.
ನ್ಯಾಯಾಲಯವು ಈ ಶಿಕ್ಷೆಯನ್ನು ಪ್ರಕಟಿಸಿದ ಬಳಿಕ ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಇದರಿಂದಾಗಿ ನಿತೇಶ್ ರಾಣೆ ಅವರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಸಿಕ್ಕಿದ್ದು, ಸದ್ಯಕ್ಕೆ ಬಂಧನದಿಂದ ಪಾರಾಗಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ 29 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು ಖುಲಾಸೆಗೊಳಿಸಿದೆ.
ಇದನ್ನೂ ಓದಿ:
ಏನಿದು ಪ್ರಕರಣ?
ಮುಂಬೈ-ಗೋವಾ ಹೆದ್ದಾರಿಯ ಕಂಕಾವ್ಲಿ ಭಾಗದಲ್ಲಿ ರಸ್ತೆಯ ಉದ್ದಕ್ಕೂ ದೊಡ್ಡ ಗುಂಡಿಗಳಿದ್ದವು ಮತ್ತು ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿತ್ತು. ರಸ್ತೆ ಅಗಲೀಕರಣ ಕಾಮಗಾರಿ ಅತ್ಯಂತ ಕಳಪೆಯಾಗಿ ನಡೆಯುತ್ತಿದೆ ಮತ್ತು ಸರಿಯಾಗಿ ಚರಂಡಿ ವ್ಯವಸ್ಥೆ ಮಾಡದ ಕಾರಣ ಪ್ರತಿದಿನ ಸಂಚರಿಸುತ್ತಿದ್ದ ಸಾವಿರಾರು ಜನರಿಗೆ ಸಮಸ್ಯೆಯಾಗುತ್ತಿತ್ತು. ದೂರು ನೀಡಿದ್ದರೂ ಸಮಸ್ಯೆ ಪರಿಹಾರ ಮಾಡದ್ದಕ್ಕೆ ಸಿಟ್ಟಾದ ರಾಣೆ 2019 ರಲ್ಲಿ ಅಧಿಕಾರಿಗಳಿಗೆ ಪಾಠ ಕಲಿಸಲು ಬೆಂಬಲಿಗರ ಜೊತೆ ಸೇರಿ NHAI ಎಂಜಿನಿಯರ್ ಮೇಲೆ ಕೆಸರು ಎರಚಿ ಪ್ರತಿಭಟನೆ ನಡೆಸಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…