Featured

ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣ : ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ – vishwanews24

ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣ:ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ನಾರಾಯಣ ರಾಣೆ ಅವರಿಗೆ ಸ್ಥಳೀಯ ಕೋರ್ಟ್‌  ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ  ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧುದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ನಿತೇಶ್ ರಾಣೆ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ.

ಇದನ್ನೂ ಓದಿ:

ನ್ಯಾಯಾಲಯ ಒಂದು ತಿಂಗಳ ಜೈಲು ಶಿಕ್ಷೆಯ ಜೊತೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಈ ಮೊತ್ತದಲ್ಲಿ 50 ಸಾವಿರ ರೂ.ಗಳನ್ನು ಸಂತ್ರಸ್ತ ಎಂಜಿನಿಯರ್‌ಗೆ ಪರಿಹಾರವಾಗಿ ನೀಡಲು ಆದೇಶಿಸಿದೆ. ಶಾಸಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಮತ್ತು ಸಾರ್ವಜನಿಕ ಸೇವಕರ ಘನತೆಗೆ ಧಕ್ಕೆ ತರುವಂತೆ ವರ್ತಿಸಬಾರದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ನ್ಯಾಯಾಲಯವು ಈ ಶಿಕ್ಷೆಯನ್ನು ಪ್ರಕಟಿಸಿದ ಬಳಿಕ ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಇದರಿಂದಾಗಿ ನಿತೇಶ್ ರಾಣೆ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಸಿಕ್ಕಿದ್ದು, ಸದ್ಯಕ್ಕೆ ಬಂಧನದಿಂದ ಪಾರಾಗಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ 29 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಇದನ್ನೂ ಓದಿ:

ಏನಿದು ಪ್ರಕರಣ?
ಮುಂಬೈ-ಗೋವಾ ಹೆದ್ದಾರಿಯ ಕಂಕಾವ್ಲಿ ಭಾಗದಲ್ಲಿ ರಸ್ತೆಯ ಉದ್ದಕ್ಕೂ ದೊಡ್ಡ ಗುಂಡಿಗಳಿದ್ದವು ಮತ್ತು ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿತ್ತು. ರಸ್ತೆ ಅಗಲೀಕರಣ ಕಾಮಗಾರಿ ಅತ್ಯಂತ ಕಳಪೆಯಾಗಿ ನಡೆಯುತ್ತಿದೆ ಮತ್ತು ಸರಿಯಾಗಿ ಚರಂಡಿ ವ್ಯವಸ್ಥೆ ಮಾಡದ ಕಾರಣ ಪ್ರತಿದಿನ ಸಂಚರಿಸುತ್ತಿದ್ದ ಸಾವಿರಾರು ಜನರಿಗೆ ಸಮಸ್ಯೆಯಾಗುತ್ತಿತ್ತು. ದೂರು ನೀಡಿದ್ದರೂ ಸಮಸ್ಯೆ ಪರಿಹಾರ ಮಾಡದ್ದಕ್ಕೆ ಸಿಟ್ಟಾದ ರಾಣೆ 2019 ರಲ್ಲಿ ಅಧಿಕಾರಿಗಳಿಗೆ ಪಾಠ ಕಲಿಸಲು ಬೆಂಬಲಿಗರ ಜೊತೆ ಸೇರಿ NHAI ಎಂಜಿನಿಯರ್ ಮೇಲೆ ಕೆಸರು ಎರಚಿ ಪ್ರತಿಭಟನೆ ನಡೆಸಿದ್ದರು.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

3 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

3 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

3 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

4 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

4 hours ago