ಕಾರವಾರ: ಬಿಜೆಪಿಯವರ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಾರಿಗೆ ಸಚಿವ ಶ್ರೀರಾಮುಲು, ನಿಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಮೊದಲು ಅದನ್ನು ತೆಗೆಯಿರಿ” ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಸೋತಾಗ ಆಡಳಿತ ವಿರೋಧಿ ಅಲೆಯಿದೆ, ಕಾಂಗ್ರೆಸ್ ಗೆಲುವಿನ ಸುನಾಮಿ ಆಗ್ತದೆ ಎಂದರು. ಎಂಥ ಸುನಾಮಿ, ಬಿರುಗಾಳಿ ಬೀಸಿದರೂ ಎದುರಿಸುವ ಶಕ್ತಿ ಬಿಜೆಪಿಗಿದೆ. ಆ ಅಲೆಯಲ್ಲಿ ಕಾಂಗ್ರೆಸ್ ಒಡೆದು ಹೋಗುತ್ತದೆ” ಎಂದರು.
ಇನ್ನು “ಕಳೆದ ಬಾರಿ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರು 1,600 ಮತಗಳಿಂದ ಗೆದ್ದಿದ್ದು, ಅದೂ ಎಣಿಕೆ ಸಂದರ್ಭದಲ್ಲಿ ಮೋಸದಿಂದ ಗೆದ್ದುಕೊಂಡರು. ಮುಖ್ಯಮಂತ್ರಿಯಾಗಿದ್ದವರು ಅಷ್ಟು ಅಂತರದಲ್ಲಿ ಗೆಲ್ಲುವುದು ದೊಡ್ಡ ವಿಚಾರವಲ್ಲ. ಮುಂದೆ ಅವರು ಎಲ್ಲಿ ಸ್ಪರ್ಧಿಸುತ್ತಾರೋ ಅಲ್ಲಿ ಕಾಂಗ್ರೆಸಿಗರೇ ಸುನಾಮಿ ರೀತಿಯಲ್ಲಿ ಕೆಲಸ ಮಾಡಿ ಅವರನ್ನು ಸೋಲಿಸುತ್ತಾರೆ” ಎಂದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕ. ದೇಶಕ್ಕೆ ಅವರು ಬೇಕಾ ಅಥವಾ ಫುಲ್ ಟೈಂ ನಾಯಕ ಮೋದಿ ಬೇಕಾ ಎಂದು ಜನರು ಯೋಚಿಸಬೇಕು ಎಂದು ಹೇಳಿದ್ದಾರೆ.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…