Featured

ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾಗೆ ಗೇಟ್ ಪಾಸ್, ಅಧ್ಯಕ್ಷರಾಗಿ ರೋಹನ್ ಗುಪ್ತಾ ನೇಮಕ -Vishwanews24

ನವದೆಹಲಿ: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹುದ್ದೆಯಿಂದ ಮಾಜಿ ಸಂಸದೆ ರಮ್ಯಾಗೆ ‘ಅಧಿಕೃತ’ವಾಗಿ ಗೇಟ್ ಪಾಸ್ ನೀಡಲಾಗಿದ್ದು, ಅವರ ಸ್ಥಾನಕ್ಕೆ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿರುವ ರೋಹನ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.

ಲೋಕಸಭಾ ಚುನಾವಣೆಯ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಲು ಕಾಂಗ್ರೆಸ್ ಹೈಕಮಾಂಡ್ ಹೊಸ ತಂಡಕ್ಕೆ ಮಣೆ ಹಾಕಿದೆ. ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ರೋಹನ್ ಗುಪ್ತಾ ಅವರನ್ನು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿರುವ ರೋಹನ್ ಗುಪ್ತಾ ಗುಜರಾತಿನ ಅಹಮದಾಬಾದ್ ನವರಾಗಿದ್ದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಾಜಕೀಯ ಉತ್ಸಾಹಿ, ಉದ್ಯಮಿ, ಪ್ರೇರಕ, ತಂದೆ, ಟ್ವೀಟ್‍ಗಳು ಕಟ್ಟುನಿಟ್ಟಾಗಿ ವೈಯಕ್ತಿಕವಾಗಿವೆ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಲೆಯಿಂದಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರಿಂದಾಗಿ ಎಚ್ಚೆತ್ತುಕೊಂಡ ಕಾಂಗ್ರೆಸ್ ಈಗ ಪಕ್ಷದ ಸಾಮಾಜಿಕ ಜಾಲತಾಣ ತಂಡವನ್ನು ಬಲಪಡಿಸಲು ಭರ್ಜರಿ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಮಾಜಿ ಸಂಸದೆ ರಮ್ಯಾ ಅವರನ್ನು ಅಧಿಕೃತವಾಗಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸ್ಥಾನದಿಂದ ಕೈಬಿಡಲಾಗಿದೆ.

 

Vishwa News 24

Recent Posts

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

3 minutes ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

18 minutes ago

ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ – vishwanews24

ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ…

30 minutes ago

ರೂರಲ್‌ ಎಜುಕೇಶನ್‌ ಸೊಸೈಟಿ ಪಟ್ಲ ಅಧ್ಯಕ್ಷರಾಗಿ ಪೆರ್ಣಂಕಿಲ ಶ್ರೀಶ ನಾಯಕ್ – vishwanews24

ರೂರಲ್‌ ಎಜುಕೇಶನ್‌ ಸೊಸೈಟಿ (ರಿ) ಪಟ್ಲ ಅಧ್ಯಕ್ಷರಾಗಿ ಪೆರ್ಣಂಕಿಲ ಶ್ರೀಶ ನಾಯಕ್ ರೂರಲ್‌ ಎಜುಕೇಶನ್‌ ಸೊಸೈಟಿ, ಪಟ್ಲ ಇದರ ವಾರ್ಷಿಕ…

33 minutes ago

ಉಜ್ವಲ ಯೋಜನೆಯ ಫಲಾನುಭವಿಗಳ ವಾರ್ಷಿಕ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ – vishwanews24

ಉಜ್ವಲ ಯೋಜನೆಯ ಫಲಾನುಭವಿಗಳ ವಾರ್ಷಿಕ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ…

38 minutes ago

ಬಂಟ್ವಾಳ : ಸೀಮಂತ ಕಾರ್ಯಕ್ರಮ ಮುಗಿಸಿ ಬರುವಾಗ ಮಿನಿ ಬಸ್ ಪಲ್ಟಿ ; ಪ್ರಯಾಣಿಕ ಸಾವು – vishwanews24

ಬಂಟ್ವಾಳ : ಸೀಮಂತ ಕಾರ್ಯಕ್ರಮ ಮುಗಿಸಿ ಬರುವಾಗ ಮಿನಿ ಬಸ್ ಪಲ್ಟಿ ; ಪ್ರಯಾಣಿಕ ಸಾವು ಬಂಟ್ವಾಳ : ಸೀಮಂತ…

47 minutes ago