ನವದೆಹಲಿ: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹುದ್ದೆಯಿಂದ ಮಾಜಿ ಸಂಸದೆ ರಮ್ಯಾಗೆ ‘ಅಧಿಕೃತ’ವಾಗಿ ಗೇಟ್ ಪಾಸ್ ನೀಡಲಾಗಿದ್ದು, ಅವರ ಸ್ಥಾನಕ್ಕೆ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿರುವ ರೋಹನ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.
ಲೋಕಸಭಾ ಚುನಾವಣೆಯ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಲು ಕಾಂಗ್ರೆಸ್ ಹೈಕಮಾಂಡ್ ಹೊಸ ತಂಡಕ್ಕೆ ಮಣೆ ಹಾಕಿದೆ. ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ರೋಹನ್ ಗುಪ್ತಾ ಅವರನ್ನು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿರುವ ರೋಹನ್ ಗುಪ್ತಾ ಗುಜರಾತಿನ ಅಹಮದಾಬಾದ್ ನವರಾಗಿದ್ದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಾಜಕೀಯ ಉತ್ಸಾಹಿ, ಉದ್ಯಮಿ, ಪ್ರೇರಕ, ತಂದೆ, ಟ್ವೀಟ್ಗಳು ಕಟ್ಟುನಿಟ್ಟಾಗಿ ವೈಯಕ್ತಿಕವಾಗಿವೆ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಲೆಯಿಂದಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರಿಂದಾಗಿ ಎಚ್ಚೆತ್ತುಕೊಂಡ ಕಾಂಗ್ರೆಸ್ ಈಗ ಪಕ್ಷದ ಸಾಮಾಜಿಕ ಜಾಲತಾಣ ತಂಡವನ್ನು ಬಲಪಡಿಸಲು ಭರ್ಜರಿ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಮಾಜಿ ಸಂಸದೆ ರಮ್ಯಾ ಅವರನ್ನು ಅಧಿಕೃತವಾಗಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸ್ಥಾನದಿಂದ ಕೈಬಿಡಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…