ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಎಂಬಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಯಿಪುದ್ದಿನ್ ಆತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಅಕ್ರಂ ವಿರುದ್ಧ ಲುಕ್ಔಟ್ ನೋಟೀಸ್ ಜಾರಿ ಮಾಡಲಾಗಿದೆ.
2016ರ ಜು.14ರಂದು ಆತ್ರಾಡಿ ಸಮೀಪದ ಶೇಡಿಗುಡ್ಡೆ ಎಂಬಲ್ಲಿ ನಡೆದ ಕೆಮ್ಮಣ್ಣುವಿನ ಶೇಖ್ ಮಹಮ್ಮದ್ ತಸ್ಲೀಮ್ ಕೊಲೆ ಪ್ರಕರಣದಲ್ಲಿ ಸೈಫ್ ಜೊತೆ ಅಕ್ರಂ ಕೂಡ ಆರೋಪಿಯಾಗಿದ್ದನು. ಆ ಬಳಿಕ ವ್ಯವಾಹರದಲ್ಲಿ ಇವರಿಬ್ಬರು ಜೊತೆಯಾಗಿದ್ದರು.
ಸೈಫ್ ಕೊಲೆಗೆ ಒಂದು ವಾರ ಮೊದಲು ಅಕ್ರಂ, ಕೊಲೆಗೆ ಸಂಬಂಧಿಸಿ ಎಲ್ಲ ರೀತಿಯ ಸಂಚು ರೂಪಿಸಿ, ದುಬೈಗೆ ಪರಾರಿಯಾಗಿದ್ದನು. ಇದೇ ವೇಳೆ ಅಕ್ರಂ, ವ್ಯವಹಾರಕ್ಕೆ ಸಂಬಂಧಿಸಿ ಸಾಲಗಳನ್ನು ಸೈಫ್ ಮತ್ತು ಸೈಫ್ನ ಪತ್ನಿ ಹೆಸರಿಗೆ ಹಾಗೂ ಲಾಭದ ವ್ಯವಹಾರವನ್ನು ತನ್ನ ಪಾಲಿಗೆ ಮಾಡಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದೀಗ ಸೈಫ್ ಕೊಲೆಗೆ ಸಂಚು ರೂಪಿಸಿ ವಿದೇಶದಲ್ಲಿ ತಲೆಮರೆಸಿ ಕೊಂಡಿರುವ ಅಕ್ರಂ ಬಂಧನಕ್ಕೆ ಉಡುಪಿ ಪೊಲೀಸರು ಕ್ರಮ ಜರಗಿಸಿದ್ದು, ಇಂಟರ್ ಪೋಲ್ ಸಹಾಯದಿಂದ ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…