ಎಲ್ಲಾರು ಮಾಡುವುದು ಅಧಿಕಾರಕ್ಕಾಗಿ. ಒಂದು ಸಿನೆಮಾ ಪ್ಲಾಫ್ ಮಾಡಲು 25 ಸಿನೆಮಾ ಬಿಡುತ್ತಾರೆ. ರಾಜಕೀಯವೂ ಹಾಗೆಯೇ. ಕುಮಾರಸ್ವಾಮಿ ಐದು ವರ್ಷ ಅಧಿಕಾರ ಮಾಡಲು ಖಂಡಿತ ಕಾಂಗ್ರೆಸ್ ಬಿಡಲ್ಲ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ನಟ ಜಗ್ಗೇಶ್ ತಿಳಿಸಿದ್ದಾರೆ.
ಬಿಎಸ್ವೈ ನಿವಾಸದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿ, ಆಗಲೇ ಸಣ್ಣದಾಗಿ ಒಳಜಗಳ ಶುರುವಾಗಿದೆ. ವೇಣುಗೋಪಾಲ್ ಹೇಳಿಕೆಯನ್ನು ಎಲ್ಲರೂ ಗಮನಿಸಿರಬಹುದು. ಮುಂದಿನ ದಿನಗಳಲ್ಲಿ ಏನಾಗಬಹುದು ಎಂದು ಕಾದು ನೋಡಿ. ಮೈತ್ರಿ ಸರ್ಕಾರ ಎನ್ನುವುದಕ್ಕಿಂತ ಅಪವಿತ್ರ ಮೈತ್ರಿ ಎನ್ನುತ್ತೇನೆ. ಜನ ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯನ್ನಾಗಿ ಮಾಡಿದ್ದರೂ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.
ನಾನು ಪ್ರಾಮಾಣಿಕವಾಗಿ ಹೇಳುತ್ತಿದ್ದೀನಿ. ನಾನು ಸ್ಪರ್ಧಿಸಿದಾಗ ಒಂದು ಪೈಸೆ ಹಂಚಿಲ್ಲ. ಆದರೆ, ಕಾಂಗ್ರೆಸ್ ನವವರು ಪ್ರತಿ ವೋಟಿಗೆ ಐದುನೂರು ಸಾವಿರ ರೂಪಾಯಿ ಹಂಚಿ ಗೆದ್ದಿದ್ದಾರೆ. ಸಿದ್ದರಾಮಯ್ಯ ಕೂಡ ಜನತಾದಳದಿಂದ ಬಂದವರೇ ಅಲ್ಲವೇ? ಹಾಗಾಗಿ ಅವರು ದೇವೇಗೌಡರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಹೇಳಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…