ಉಡುಪಿ

ಎಚ್‌ಡಿಡಿ ಜೊತೆ ಕೈ ಜೋಡಿಸಿದ ಸಿದ್ದರಾಮಯ್ಯ ; ನಾವೆಲ್ಲಾ ಒಂದಾಗಿ ಕೋಮುವಾದಿ ಬಿಜೆಪಿ ಸೋಲಿಸುವುದೇ ಗುರಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತದ್ವಿರುದ್ಧ ದಿಕ್ಕಿನಲ್ಲಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು 12 ವರ್ಷಗಳ ನಂತರ ಜಂಟಿ ಸುದ್ದಿಗೋಷ್ಠಿ  ನಡೆಸಿ ಒಂದೇ ವೇದಿಕೆಗೆ ಬರುವ ಮೂಲಕ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯನ್ನು ಗಮನವಿಟ್ಟುಕೊಂಡು ನಾವೆಲ್ಲಾ ಹಳೆಯದನ್ನು ಮರೆತು ಒಂದಾಗಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಹೇಳಿದ್ದಾರೆ.

ನಮಗೆ  ರಾಜ್ಯದ ಅಭಿವೃದ್ಧಿ ಮುಖ್ಯ, ಹಳೆಯದನ್ನು ಮರೆತು ಬಿಡಿ ಎಂದ ದೇವೇಗೌಡರು ನಮ್ಮದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಎಂದು ಅಚ್ಚರಿ ಮೂಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ  ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ , ಮೋದಿ ಪ್ರಧಾನಿ ಆದ ಮೇಲೆ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಜನಸಾಮಾನ್ಯರಿಗೆ ನೀಡಿದ ಭರವಸೆಗಳು ಹುಸಿಯಾಗಿದೆ. ಜನಸಾಮಾನ್ಯರ ಬದುಕು, ರೈತರ ಬದುಕು ದುಸ್ಥರವಾಗಿದೆ. ಜನರ ಕಷ್ಟಗಳನ್ನು ಆಲಿಸುವ ಕೆಲಸವನ್ನು ಮೋದಿ ಮಾಡಿಲ್ಲ ಎಂದರು.

ನಾವು ಕಾಯಾ, ವಾಚಾ, ಮನಸಾ ಕೆಲಸ ಮಾಡುತ್ತಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ  28 ಕ್ಕೆ 28 ಸ್ಥಾನಗಳನ್ನೂ ಹೊಂದಾಣಿಕೆಯಿಂದ ಗೆಲ್ಲಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.

ಸುದ್ದಿಗೋಷ್ಠಿಯಲ್ಲಿ ಸಚಿವರಾದ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಡಿಸಿಎಂ ಡಾ.ಜಿ.ಪರಮೇಶ್ವರ್‌ ಮೊದಲಾದವರು ಹಾಜರಿದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago