ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತದ್ವಿರುದ್ಧ ದಿಕ್ಕಿನಲ್ಲಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ವರ್ಷಗಳ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದೇ ವೇದಿಕೆಗೆ ಬರುವ ಮೂಲಕ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯನ್ನು ಗಮನವಿಟ್ಟುಕೊಂಡು ನಾವೆಲ್ಲಾ ಹಳೆಯದನ್ನು ಮರೆತು ಒಂದಾಗಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.
ನಮಗೆ ರಾಜ್ಯದ ಅಭಿವೃದ್ಧಿ ಮುಖ್ಯ, ಹಳೆಯದನ್ನು ಮರೆತು ಬಿಡಿ ಎಂದ ದೇವೇಗೌಡರು ನಮ್ಮದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಎಂದು ಅಚ್ಚರಿ ಮೂಡಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ , ಮೋದಿ ಪ್ರಧಾನಿ ಆದ ಮೇಲೆ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಜನಸಾಮಾನ್ಯರಿಗೆ ನೀಡಿದ ಭರವಸೆಗಳು ಹುಸಿಯಾಗಿದೆ. ಜನಸಾಮಾನ್ಯರ ಬದುಕು, ರೈತರ ಬದುಕು ದುಸ್ಥರವಾಗಿದೆ. ಜನರ ಕಷ್ಟಗಳನ್ನು ಆಲಿಸುವ ಕೆಲಸವನ್ನು ಮೋದಿ ಮಾಡಿಲ್ಲ ಎಂದರು.
ನಾವು ಕಾಯಾ, ವಾಚಾ, ಮನಸಾ ಕೆಲಸ ಮಾಡುತ್ತಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಸ್ಥಾನಗಳನ್ನೂ ಹೊಂದಾಣಿಕೆಯಿಂದ ಗೆಲ್ಲಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.
ಸುದ್ದಿಗೋಷ್ಠಿಯಲ್ಲಿ ಸಚಿವರಾದ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಡಾ.ಜಿ.ಪರಮೇಶ್ವರ್ ಮೊದಲಾದವರು ಹಾಜರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…