Featured

“ಎಚ್‌.ಡಿ.ದೇವೇಗೌಡ ಅವರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಬಗೆಹರಿಯುತ್ತಿತ್ತು : ಪೇಜಾವರ ಶ್ರೀ -Vishwanews24

ಉಡುಪಿ: “ಎಚ್‌.ಡಿ.ದೇವೇಗೌಡ ಅವರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಕೂಡ ಬಗೆಹರಿಯುತ್ತಿತ್ತು’ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ದೇವೇಗೌಡ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಅನಂತರ ಉಡುಪಿ ಗೋವಿಂದ ಕಲ್ಯಾಣಮಂಟಪದಲ್ಲಿ ಜನ್ಮನಕ್ಷತ್ರ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭ ಪೇಜಾವರ ಶ್ರೀಗಳು ಆಶೀರ್ವಚನ ನೀಡಿದರು.

“ದೇವೇಗೌಡ ಅವರು ಹಲವು ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಅವರು ರಾಜ್ಯದ ಪ್ರಾಮಾಣಿಕ, ಹೆಮ್ಮೆಯ ರಾಜಕಾರಣಿ. ಅವರು ಪ್ರಧಾನಿಯಾಗಿದ್ದಾಗ ಹೊಸದಿಲ್ಲಿಯಲ್ಲಿ ಮಠಕ್ಕೆಂದು ಒಂದು ಎಕರೆ ಜಾಗವನ್ನು ಕಡಿಮೆ ಬೆಲೆಗೆ ನೀಡಿದ್ದರು. ಅದರಲ್ಲಿ ಮಠ ಆಗಿದೆ. ಜುಲೈನಲ್ಲಿ ಸಂಶೋಧನಾ ಕೇಂದ್ರ ಆರಂಭಗೊಳ್ಳಲಿದೆ’ ಎಂದು ಶ್ರೀಗಳು ಹೇಳಿದರು. ದಂಪತಿಗೆ ಶ್ರೀಕೃಷ್ಣ ಪೂರ್ಣ ಅನುಗ್ರಹ ನೀಡಲಿ ಎಂದು ಹರಸಿದರು.

ಉಡುಪಿ ಶ್ರೀ ಗೋವಿಂದ ಕಲ್ಯಾಣಮಂಟಪದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಜನ್ಮ ನಕ್ಷತ್ರ ಸಮಾರಂಭದ ಪ್ರಯುಕ್ತ ಪೂಜೆಯಲ್ಲಿ ಪಾಲ್ಗೊಂಡ ದೇವೇಗೌಡ ದಂಪತಿ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಶ್ರೀಗಳು ಶಾಲು, ಹಾರ ಹಾಕಿ ಆಶೀರ್ವಚಿಸಿದರು.

 

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago