Featured

“ಎಚ್‌.ಡಿ.ದೇವೇಗೌಡ ಅವರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಬಗೆಹರಿಯುತ್ತಿತ್ತು : ಪೇಜಾವರ ಶ್ರೀ -Vishwanews24

ಉಡುಪಿ: “ಎಚ್‌.ಡಿ.ದೇವೇಗೌಡ ಅವರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಕೂಡ ಬಗೆಹರಿಯುತ್ತಿತ್ತು’ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ದೇವೇಗೌಡ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಅನಂತರ ಉಡುಪಿ ಗೋವಿಂದ ಕಲ್ಯಾಣಮಂಟಪದಲ್ಲಿ ಜನ್ಮನಕ್ಷತ್ರ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭ ಪೇಜಾವರ ಶ್ರೀಗಳು ಆಶೀರ್ವಚನ ನೀಡಿದರು.

“ದೇವೇಗೌಡ ಅವರು ಹಲವು ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಅವರು ರಾಜ್ಯದ ಪ್ರಾಮಾಣಿಕ, ಹೆಮ್ಮೆಯ ರಾಜಕಾರಣಿ. ಅವರು ಪ್ರಧಾನಿಯಾಗಿದ್ದಾಗ ಹೊಸದಿಲ್ಲಿಯಲ್ಲಿ ಮಠಕ್ಕೆಂದು ಒಂದು ಎಕರೆ ಜಾಗವನ್ನು ಕಡಿಮೆ ಬೆಲೆಗೆ ನೀಡಿದ್ದರು. ಅದರಲ್ಲಿ ಮಠ ಆಗಿದೆ. ಜುಲೈನಲ್ಲಿ ಸಂಶೋಧನಾ ಕೇಂದ್ರ ಆರಂಭಗೊಳ್ಳಲಿದೆ’ ಎಂದು ಶ್ರೀಗಳು ಹೇಳಿದರು. ದಂಪತಿಗೆ ಶ್ರೀಕೃಷ್ಣ ಪೂರ್ಣ ಅನುಗ್ರಹ ನೀಡಲಿ ಎಂದು ಹರಸಿದರು.

ಉಡುಪಿ ಶ್ರೀ ಗೋವಿಂದ ಕಲ್ಯಾಣಮಂಟಪದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಜನ್ಮ ನಕ್ಷತ್ರ ಸಮಾರಂಭದ ಪ್ರಯುಕ್ತ ಪೂಜೆಯಲ್ಲಿ ಪಾಲ್ಗೊಂಡ ದೇವೇಗೌಡ ದಂಪತಿ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಶ್ರೀಗಳು ಶಾಲು, ಹಾರ ಹಾಕಿ ಆಶೀರ್ವಚಿಸಿದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 minutes ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago