ತುಮಕೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ನಾಲಗೆಯ ಸಿಎಂ ಎಂದು ಕಾಂಗ್ರೆಸ್ ಮಾಜಿ ಶಾಸಕ ಹಾಗು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅಸಮಾಧಾನ ಹೊರ ಹಾಕಿದ್ದಾರೆ.
ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಹೇಳುವುದು ಒಂದು ಮಾಡುವುದು ಇನ್ನೊಂದು. ಮೊದಲಿಗೆ ರೈತರ ಸಂಪೂರ್ಣ ಸಾಲಮನ್ನಾ ಎಂದು ಹೇಳಿದರು. ಈಗ ರೈತರ ಸಾಲಮನ್ನಾ ಎನ್ನುವುದು ಕನ್ನಡಿಯೊಳಗಿನ ಕಗ್ಗಾಂಟಾಗಿದೆ. ಸಾಲಮನ್ನಾವು ದೊಡ್ಡ ದೊಡ್ಡ ಎಸ್ಟೇಟ್ ಹೊಂದಿರುವ ಉದ್ಯಮಿಗಳಿಗೆ ವರದಾನವಾಗಲಿದೆ ಎಂದು ವ್ಯಂಗ್ಯ ಮಾಡಿದರು.
ಬಜೆಟ್ನಲ್ಲಿ ತುಮಕೂರು ಜಿಲ್ಲೆಯನ್ನು ಕಡೆಗಣಿಸಲಾಗಿದ್ದು, ಈ ಹಿಂದೆ ಜಿಲ್ಲೆಯ ವೈದ್ಯಕೀಯ ಕಾಲೇಜು ಮಂಜೂರಾಗಿತ್ತು. ಆದ್ರೆ ಸಿಎಂ ಈ ಬಾರಿ ಬಜೆಟ್ ನಲ್ಲಿ ಕಾಲೇಜಿನ ಬಗ್ಗೆ ಪ್ರಸ್ತಾಪಿಸದೇ ಮೋಸ ಮಾಡಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರ ಕೆಲ ಯೋಜನೆಗೆ ಕತ್ತರಿ ಹಾಕಿದ್ದು, ಅನ್ನ ಭಾಗ್ಯ ಯೋಜನೆಯಲ್ಲಿ 2 ಕೆ.ಜಿ. ಅಕ್ಕಿಯನ್ನು ಕಡಿಮೆ ಮಾಡುವ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಜಿಲ್ಲೆಗೆ ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಯೋಜನೆಗಳನ್ನು ಎಚ್ಡಿಕೆ ಮುಂದುವರಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಲ್ಲೂ ಮೋಸ ಮಾಡಲಾಗಿದೆ. ಡೀಸೆಲ್, ಪೆಟ್ರೋಲ್ ಮತ್ತು ವಿದ್ಯುತ್ ದರ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಹೊರೆ ಹೇರಿದ್ದಾರೆ ಎಂದು ಬಜೆಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…