ತುಮಕೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ನಾಲಗೆಯ ಸಿಎಂ ಎಂದು ಕಾಂಗ್ರೆಸ್ ಮಾಜಿ ಶಾಸಕ ಹಾಗು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅಸಮಾಧಾನ ಹೊರ ಹಾಕಿದ್ದಾರೆ.
ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಹೇಳುವುದು ಒಂದು ಮಾಡುವುದು ಇನ್ನೊಂದು. ಮೊದಲಿಗೆ ರೈತರ ಸಂಪೂರ್ಣ ಸಾಲಮನ್ನಾ ಎಂದು ಹೇಳಿದರು. ಈಗ ರೈತರ ಸಾಲಮನ್ನಾ ಎನ್ನುವುದು ಕನ್ನಡಿಯೊಳಗಿನ ಕಗ್ಗಾಂಟಾಗಿದೆ. ಸಾಲಮನ್ನಾವು ದೊಡ್ಡ ದೊಡ್ಡ ಎಸ್ಟೇಟ್ ಹೊಂದಿರುವ ಉದ್ಯಮಿಗಳಿಗೆ ವರದಾನವಾಗಲಿದೆ ಎಂದು ವ್ಯಂಗ್ಯ ಮಾಡಿದರು.
ಬಜೆಟ್ನಲ್ಲಿ ತುಮಕೂರು ಜಿಲ್ಲೆಯನ್ನು ಕಡೆಗಣಿಸಲಾಗಿದ್ದು, ಈ ಹಿಂದೆ ಜಿಲ್ಲೆಯ ವೈದ್ಯಕೀಯ ಕಾಲೇಜು ಮಂಜೂರಾಗಿತ್ತು. ಆದ್ರೆ ಸಿಎಂ ಈ ಬಾರಿ ಬಜೆಟ್ ನಲ್ಲಿ ಕಾಲೇಜಿನ ಬಗ್ಗೆ ಪ್ರಸ್ತಾಪಿಸದೇ ಮೋಸ ಮಾಡಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರ ಕೆಲ ಯೋಜನೆಗೆ ಕತ್ತರಿ ಹಾಕಿದ್ದು, ಅನ್ನ ಭಾಗ್ಯ ಯೋಜನೆಯಲ್ಲಿ 2 ಕೆ.ಜಿ. ಅಕ್ಕಿಯನ್ನು ಕಡಿಮೆ ಮಾಡುವ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಜಿಲ್ಲೆಗೆ ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಯೋಜನೆಗಳನ್ನು ಎಚ್ಡಿಕೆ ಮುಂದುವರಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಲ್ಲೂ ಮೋಸ ಮಾಡಲಾಗಿದೆ. ಡೀಸೆಲ್, ಪೆಟ್ರೋಲ್ ಮತ್ತು ವಿದ್ಯುತ್ ದರ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಹೊರೆ ಹೇರಿದ್ದಾರೆ ಎಂದು ಬಜೆಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…