ಬೆಂಗಳೂರು : ಮುನ್ನೆಚ್ಚರಿಕೆ ಕ್ರಮ, ಜಾಗೃತಿ ಕಾರ್ಯಕ್ರಮಗಳ ಮೂಲಕ ಎಚ್ಐವಿ ಸೋಂಕು ಹರಡುವುದನ್ನು ತಡೆಗಟ್ಟಬೇಕು. ಎಚ್ಐವಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುದಾನ ನೀಡಲಾಗುತ್ತಿದೆ. ಅವರಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಔಷಧಿ ನೀಡಬೇಕು ಎಂದು ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ರೋಗಿಗಳಿಗೆ ಇದು ಅನ್ವಯವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗತಿಕ ಒಗ್ಗಟ್ಟು, ಜವಾಬ್ದಾರಿಯ ಹಂಚಿಕೆಯೊಂದಿಗೆ ಏಡ್ಸ್ ನಿಯಂತ್ರಣಕ್ಕೆ ತರಬೇಕು ಎಂದು ಈ ಬಾರಿ ಘೋಷಿಸಲಾಗಿದೆ. ಎಚ್ ಐವಿಗೊಳಗಾದವರು ಮಾನಸಿಕ ಖಿನ್ನತೆಗೆ ಒಳಗಾಗಿರುತ್ತಾರೆ. ಕೋವಿಡ್ ಬಂದಾಗ, ‘ರೋಗದ ವಿರುದ್ಧ ಹೋರಾಡಬೇಕೆ ಹೊರತು ರೋಗಿಯ ವಿರುದ್ಧ ಅಲ್ಲ’ ಎಂಬ ಸಂದೇಶ ನೀಡಲಾಯಿತು. ಈ ಸಂದೇಶ ಎಲ್ಲ ರೋಗಗಳಿಗೂ ಅನ್ವಯವಾಗುತ್ತದೆ. ಏಡ್ಸ್ ರೋಗಿಗಳನ್ನು ಅವಮಾನಕಾರಿಯಾಗಿ ನೋಡಬಾರದು ಎಂದರು.
ಉತ್ತಮ ಆರೋಗ್ಯ ಸೌಲಭ್ಯಗಳು ಇರುವುದರಿಂದ ಏಡ್ಸ್ ಪ್ರಕರಣಗಳಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿದೆ. 99 ವರ್ಷದ ಎಚ್ ಐವಿ ಸೋಂಕಿತರು ಕೂಡ ಜೀವಂತವಾಗಿ ಆರೋಗ್ಯದಿಂದಿದ್ದಾರೆ. ಆ ಮಟ್ಟಿಗೆ ಆರೋಗ್ಯ ಸೌಲಭ್ಯಗಳಿವೆ. ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಮೂಲಕ ಉಚಿತ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ ಎಂದರು.
ಎಚ್ ಐವಿ ಸೋಂಕಿತರಿಗೆ ಕೋವಿಡ್ ಕೂಡ ಬಂದರೆ ಕಷ್ಟ ಎಂದು ಮೊದಲಿಗೆ ಭಯವಾಗಿತ್ತು. ರಾಜ್ಯದಲ್ಲಿ 280 ಎಚ್ ಐವಿ ಸೋಂಕಿತರು ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಪೈಕಿ 275 ಮಂದಿ ಜೀವಂತವಾಗಿದ್ದು, ಅವರ ಆರೋಗ್ಯ ಸುರಕ್ಷಿತವಾಗಿದೆ ಎಂದರು.
ಎಚ್ಐವಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುದಾನ ನೀಡಲಾಗುತ್ತಿದೆ. ಅವರಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಔಷಧಿ ನೀಡಬೇಕು ಎಂದು ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ರೋಗಿಗಳಿಗೆ ಇದು ಅನ್ವಯವಾಗಲಿದೆ ಎಂದು ತಿಳಿಸಿದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…