ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ.
ಮೊದಲು ಆರ್.ಟಿ.ನಗರದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಬೊಮ್ಮಾಯಿಯವರನ್ನು ಭೇಟಿ ಮಾಡಿದ ವಿಜಯೇಂದ್ರ, ಬಳಿಕ ಪದ್ಮನಾಭನಗರದಲ್ಲಿರುವ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಪ್ರಧಾನಿಗಳನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಎಂ.ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ಡಿ.ಸಿ.ತಮ್ಮಣ್ಣನವರು ಉಪಸ್ಥಿತರಿದ್ದರು.
ಇನ್ನು ”ಕರುನಾಡಿನ ಹೆಮ್ಮೆ, ಗೌರವಾನ್ವಿತ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಯಿತು. ಈ ವೇಳೆ ಅವರು ಪ್ರೀತಿಯಿಂದ ಸನ್ಮಾನಿಸಿ ಶುಭ ಹಾರೈಸಿದ್ದು ನನ್ನ ರಾಜಕೀಯ ಜೀವನದ ಅವಿಸ್ಮರಣಿಯ ಕ್ಷಣವಾಗಿಸಿತು. ಈ ಹೊತ್ತಿಗೂ ಸ್ಫೂರ್ತಿಯ ಚಿಲುಮೆ ಯಾಗಿರುವ ಅವರ ‘ಹೋರಾಟದ ಛಲ – ಆತ್ಮಸ್ಥೈರ್ಯದ ಬಲ’ ನನ್ನಂಥವರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ” ಎಂದು ದೇವೇಗೌಡರ ಭೇಟಿ ಬಗ್ಗೆ ವಿಜಯೇಂದ್ರ ಅವರು ಟ್ವಟರ್ ನಲ್ಲಿ ಬರೆದುಕೊಂಡಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…