ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬ : ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಣೆ – Vishwanews24
ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬ : ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಣೆ
ಮಾಜಿ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬವನ್ನು ದಿನಾಂಕ 18.05.2023 ನೇ ಗುರುವಾರದಂದು ಬೆಳಗ್ಗೆ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಯೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು., ಮತ್ತು ಅವರು ರಾಜ್ಯ, ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ಮುಕ್ತ ಕಂಠದಿಂದ ಹೊಗಳಲಾಯಿತು. ಉಡುಪಿ ಜಿಲ್ಲಾ ಜನತಾದಳ ವತಿಯಿಂದ ಮತ್ತು ಉಡುಪಿ ಜನತೆಯ ಪರವಾಗಿ ಅವರಿಗೆ ಶುಭ ಹಾರೈಸಿ,ಆರೋಗ್ಯ ಭಾಗ್ಯ, ಸುಖ ಶಾಂತಿ ನೆಮ್ಮದಿ ಸಿಗಲಿ,ನೂರು ಕಾಲ ಬಾಳಲೆಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ, ಕಾರ್ಯಧ್ಯಕ್ಷರಾದ ವಾಸುದೇವ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಶಾಲಿನಿ ಬಿ ಶೆಟ್ಟಿ, ಕೆಂಚನೂರ್, ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಶ್ರೀ ಭರತ್ ಕುಮಾರ್ ಶೆಟ್ಟಿ,ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶ್ರೀ ಫೈಝನ್ ಅಹ್ಮದ್, ನಾಯಕರುಗಳಾದ,ರಾಮರಾವ್, ಶ್ರೀಮತಿ ವಿಶಾಲಾಕ್ಷಿ, ರಂಗ ಕೋಟ್ಯಾನ್, ರಶೀದ್ ಯುಎ,ನವೀನ್ ಕುಲಾಲ್, ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ – Vishwanews24
