Featured

ಎಟಿಎಂನಿಂದ ಒಂದು ಬಾರಿ ಹಣ ತೆಗೆದರೆ ಪುನಃ 6 ರಿಂದ 12 ಗಂಟೆವರೆಗೆ ಅದೇ ಕಾರ್ಡ್ ನಿಂದ ಡ್ರಾ ಮಾಡಲು ಸಾಧ್ಯವಾಗಲ್ಲ…ಹೊಸ ನಿಯಮಕ್ಕೆ ಎಸ್‍ಎಲ್‍ಬಿಸಿ ಚಿಂತನೆ !! ಓದಿ ಈ ವರದಿ -Vishwanews24

ಹೊಸದಿಲ್ಲಿ: ಎಟಿಎಂ ವಂಚನೆ ತಡೆಯಲು ದೆಹಲಿ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿ (ಎಸ್‌ಎಲ್‌ಬಿಸಿ) ಹಲವು ಮಾರ್ಗೋಪಾಯಗಳನ್ನು ಸಲಹೆ ಮಾಡಿದ್ದು, ಒಂದು ಬಾರಿ ಎಟಿಎಂನಿಂದ ಹಣ ಪಡೆದು ಮತ್ತೊಂದು ಬಾರಿ ಹಣ ಪಡೆಯಲು ಕನಿಷ್ಠ ಆರರಿಂದ ಹನ್ನೆರಡು ಗಂಟೆ ಅಂತರ ನಿಗದಿಪಡಿಸುವುದು ಇವುಗಳಲ್ಲಿ ಪ್ರಮುಖ.

“ಹಲವು ವಂಚನೆಗಳು ರಾತ್ರಿ ಅಂದರೆ ಮಧ್ಯರಾತ್ರಿಯಿಂದ ಮುಂಜಾನೆವರೆಗೆ ನಡೆಯುತ್ತವೆ. ನಿರ್ದಿಷ್ಟ ಅವಧಿಯಲ್ಲಿ ವಹಿವಾಟು ಸ್ಥಗಿತಗೊಳಿಸುವುದು ವಂಚನೆ ತಡೆಯಲು ನೆರವಾಗಬಹುದು” ಎಂದು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್‌ನ ಎಂಡಿ ಹಾಗೂ ಸಿಇಒ, ಎಸ್‌ಎಲ್‌ಬಿಸಿ ಸಂಯೋಜಕ ಮುಖೇಶ್ ಕುಮಾರ್ ಜೈನ್ ಅಭಿಪ್ರಾಯಪಟ್ಟಿದ್ದಾರೆ.

ಹದಿನೆಂಟು ಮಂದಿ ಉನ್ನತ ಬ್ಯಾಂಕ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಪ್ರಸ್ತಾವನೆ ಸ್ವೀಕರಿಸಿದಲ್ಲಿ, ನಿರ್ದಿಷ್ಟ ಅವಧಿಯಲ್ಲಿ ಹಣ ಪಡೆಯಲು ಸಾಧ್ಯವಾಗುವುದಿಲ್ಲ.ಈ ಬಗ್ಗೆ ಕೇವಲ ಚರ್ಚೆಗಳು ನಡೆದಿದ್ದು, ಕಾರ್ಯರೂಪಕ್ಕೆ ಬಂದಿಲ್ಲ.

2018-19ರ ಅವಧಿಯಲ್ಲಿ ದೆಹಲಿಯಲ್ಲಿ 179 ಎಟಿಎಂ ವಂಚನೆ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ (233) ಹೊರತುಪಡಿಸಿದರೆ ಇದು ದೇಶದಲ್ಲೇ ಅತ್ಯಧಿಕ. ಇತ್ತೀಚಿನ ತಿಂಗಳುಗಳಲ್ಲಿ ಕಾರ್ಡ್ ಕ್ಲೋನಿಂಗ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ದೊಡ್ಡಸಂಖ್ಯೆಯಲ್ಲಿ ವಿದೇಶಿಯರೂ ಈ ದಂಧೆಯ ಹಿಂದಿದ್ದಾರೆ. 2018-19ರಲ್ಲಿ ದೇಶಾದ್ಯಂತ 980 ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದು ಹಿಂದಿನ ವರ್ಷ (911)ಕ್ಕೆ ಹೋಲಿಸಿದರೆ ಅಧಿಕ.

ಬ್ಯಾಂಕ್ ಅಧಿಕಾರಿಗಳು ಇತರ ಹಲವು ಮಾರ್ಗೋಪಾಯಗಳನ್ನು ಶಿಫಾರಸ್ಸು ಮಾಡಿದ್ದು, ಒಂದು ಬಾರಿಯ ಪಾಸ್‌ವರ್ಡ್ (ಒಟಿಪಿ) ಸಂಪರ್ಕಿಸಿ ಹಣ ಪಡೆಯಲು ಅವಕಾಶ ನೀಡುವುದು ಇದರಲ್ಲಿ ಸೇರಿದೆ. ಇದರಿಂದಾಗಿ ಅನಧಿಕೃತ ಹಣ ಪಡೆಯುವ ಪ್ರಯತ್ನ ಮಾಡಿದರೆ ಖಾತೆದಾರರಿಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್‌ಲೈನ್ ವಹಿವಾಟು ನಡೆಸುವ ವ್ಯವಸ್ಥೆಯಂತೆ ಇದು ಇರುತ್ತದೆ ಎಂದು ಜೈನ್ ವಿವರಿಸಿದ್ದಾರೆ. ದ್ವಿಮುಖ ಸಂವಹನಕ್ಕಾಗಿ ಎಟಿಎಂಗೆ ಸಂಬಂಧಿಸಿ ಕೇಂದ್ರೀಯ ಕಣ್ಗಾವಲು ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಎಟಿಎಂನಿಂದ ಹೆಚ್ಚಿನ ಹಣ ಡ್ರಾ ಮಾಡುವಾಗ ಗ್ರಾಹಕರ ಮೊಬೈಲ್ ಗೆ ಸಂದೇಶ ಕಳುಹಿಸಿ, ಓಟಿಪಿ ನಂಬರ್ ಪಡೆಯುವ ವ್ಯವಸ್ಥೆ ರೂಪಿಸಲು ಸಹ ಚಿಂತಿಸಲಾಗಿದೆ. ಈ ರೀತಿಯ ವ್ಯವಸ್ಥೆಯಿಂದ ಡೆಬಿಟ್, ಕ್ರೆಡಿಟ್ ಕಾರ್ಡ್ ಗಳ ದುರ್ಬಳಕೆ ತಡೆಯಲು ಸಾಧ್ಯವಾಗಲಿದೆ. ಬೇರೆಯವರು ನಿಮ್ಮ ಕಾರ್ಡ್ ನಿಂದ ಹಣ ಡ್ರಾ ಮಾಡುತ್ತಿದ್ದರೆ, ಮೆಸೇಜ್ ಮೂಲಕ ಎಚ್ಚೆತ್ತುಕೊಳ್ಳಬಹುದು ಎಂದು ಮುಕೇಶ್ ಕುಮಾರ್ ಜೈನ್ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

49 minutes ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

1 hour ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

1 hour ago

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು – vishwanews24

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…

3 hours ago

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ – vishwanews24

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…

3 hours ago

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

4 hours ago