Featured

ಎಟಿಎಂನಿಂದ ಒಂದು ಬಾರಿ ಹಣ ತೆಗೆದರೆ ಪುನಃ 6 ರಿಂದ 12 ಗಂಟೆವರೆಗೆ ಅದೇ ಕಾರ್ಡ್ ನಿಂದ ಡ್ರಾ ಮಾಡಲು ಸಾಧ್ಯವಾಗಲ್ಲ…ಹೊಸ ನಿಯಮಕ್ಕೆ ಎಸ್‍ಎಲ್‍ಬಿಸಿ ಚಿಂತನೆ !! ಓದಿ ಈ ವರದಿ -Vishwanews24

ಹೊಸದಿಲ್ಲಿ: ಎಟಿಎಂ ವಂಚನೆ ತಡೆಯಲು ದೆಹಲಿ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿ (ಎಸ್‌ಎಲ್‌ಬಿಸಿ) ಹಲವು ಮಾರ್ಗೋಪಾಯಗಳನ್ನು ಸಲಹೆ ಮಾಡಿದ್ದು, ಒಂದು ಬಾರಿ ಎಟಿಎಂನಿಂದ ಹಣ ಪಡೆದು ಮತ್ತೊಂದು ಬಾರಿ ಹಣ ಪಡೆಯಲು ಕನಿಷ್ಠ ಆರರಿಂದ ಹನ್ನೆರಡು ಗಂಟೆ ಅಂತರ ನಿಗದಿಪಡಿಸುವುದು ಇವುಗಳಲ್ಲಿ ಪ್ರಮುಖ.

“ಹಲವು ವಂಚನೆಗಳು ರಾತ್ರಿ ಅಂದರೆ ಮಧ್ಯರಾತ್ರಿಯಿಂದ ಮುಂಜಾನೆವರೆಗೆ ನಡೆಯುತ್ತವೆ. ನಿರ್ದಿಷ್ಟ ಅವಧಿಯಲ್ಲಿ ವಹಿವಾಟು ಸ್ಥಗಿತಗೊಳಿಸುವುದು ವಂಚನೆ ತಡೆಯಲು ನೆರವಾಗಬಹುದು” ಎಂದು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್‌ನ ಎಂಡಿ ಹಾಗೂ ಸಿಇಒ, ಎಸ್‌ಎಲ್‌ಬಿಸಿ ಸಂಯೋಜಕ ಮುಖೇಶ್ ಕುಮಾರ್ ಜೈನ್ ಅಭಿಪ್ರಾಯಪಟ್ಟಿದ್ದಾರೆ.

ಹದಿನೆಂಟು ಮಂದಿ ಉನ್ನತ ಬ್ಯಾಂಕ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಪ್ರಸ್ತಾವನೆ ಸ್ವೀಕರಿಸಿದಲ್ಲಿ, ನಿರ್ದಿಷ್ಟ ಅವಧಿಯಲ್ಲಿ ಹಣ ಪಡೆಯಲು ಸಾಧ್ಯವಾಗುವುದಿಲ್ಲ.ಈ ಬಗ್ಗೆ ಕೇವಲ ಚರ್ಚೆಗಳು ನಡೆದಿದ್ದು, ಕಾರ್ಯರೂಪಕ್ಕೆ ಬಂದಿಲ್ಲ.

2018-19ರ ಅವಧಿಯಲ್ಲಿ ದೆಹಲಿಯಲ್ಲಿ 179 ಎಟಿಎಂ ವಂಚನೆ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ (233) ಹೊರತುಪಡಿಸಿದರೆ ಇದು ದೇಶದಲ್ಲೇ ಅತ್ಯಧಿಕ. ಇತ್ತೀಚಿನ ತಿಂಗಳುಗಳಲ್ಲಿ ಕಾರ್ಡ್ ಕ್ಲೋನಿಂಗ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ದೊಡ್ಡಸಂಖ್ಯೆಯಲ್ಲಿ ವಿದೇಶಿಯರೂ ಈ ದಂಧೆಯ ಹಿಂದಿದ್ದಾರೆ. 2018-19ರಲ್ಲಿ ದೇಶಾದ್ಯಂತ 980 ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದು ಹಿಂದಿನ ವರ್ಷ (911)ಕ್ಕೆ ಹೋಲಿಸಿದರೆ ಅಧಿಕ.

ಬ್ಯಾಂಕ್ ಅಧಿಕಾರಿಗಳು ಇತರ ಹಲವು ಮಾರ್ಗೋಪಾಯಗಳನ್ನು ಶಿಫಾರಸ್ಸು ಮಾಡಿದ್ದು, ಒಂದು ಬಾರಿಯ ಪಾಸ್‌ವರ್ಡ್ (ಒಟಿಪಿ) ಸಂಪರ್ಕಿಸಿ ಹಣ ಪಡೆಯಲು ಅವಕಾಶ ನೀಡುವುದು ಇದರಲ್ಲಿ ಸೇರಿದೆ. ಇದರಿಂದಾಗಿ ಅನಧಿಕೃತ ಹಣ ಪಡೆಯುವ ಪ್ರಯತ್ನ ಮಾಡಿದರೆ ಖಾತೆದಾರರಿಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್‌ಲೈನ್ ವಹಿವಾಟು ನಡೆಸುವ ವ್ಯವಸ್ಥೆಯಂತೆ ಇದು ಇರುತ್ತದೆ ಎಂದು ಜೈನ್ ವಿವರಿಸಿದ್ದಾರೆ. ದ್ವಿಮುಖ ಸಂವಹನಕ್ಕಾಗಿ ಎಟಿಎಂಗೆ ಸಂಬಂಧಿಸಿ ಕೇಂದ್ರೀಯ ಕಣ್ಗಾವಲು ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಎಟಿಎಂನಿಂದ ಹೆಚ್ಚಿನ ಹಣ ಡ್ರಾ ಮಾಡುವಾಗ ಗ್ರಾಹಕರ ಮೊಬೈಲ್ ಗೆ ಸಂದೇಶ ಕಳುಹಿಸಿ, ಓಟಿಪಿ ನಂಬರ್ ಪಡೆಯುವ ವ್ಯವಸ್ಥೆ ರೂಪಿಸಲು ಸಹ ಚಿಂತಿಸಲಾಗಿದೆ. ಈ ರೀತಿಯ ವ್ಯವಸ್ಥೆಯಿಂದ ಡೆಬಿಟ್, ಕ್ರೆಡಿಟ್ ಕಾರ್ಡ್ ಗಳ ದುರ್ಬಳಕೆ ತಡೆಯಲು ಸಾಧ್ಯವಾಗಲಿದೆ. ಬೇರೆಯವರು ನಿಮ್ಮ ಕಾರ್ಡ್ ನಿಂದ ಹಣ ಡ್ರಾ ಮಾಡುತ್ತಿದ್ದರೆ, ಮೆಸೇಜ್ ಮೂಲಕ ಎಚ್ಚೆತ್ತುಕೊಳ್ಳಬಹುದು ಎಂದು ಮುಕೇಶ್ ಕುಮಾರ್ ಜೈನ್ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago