ಹೊಸದಿಲ್ಲಿ: ಎಟಿಎಂ ವಂಚನೆ ತಡೆಯಲು ದೆಹಲಿ ರಾಜ್ಯಮಟ್ಟದ ಬ್ಯಾಂಕರ್ಗಳ ಸಮಿತಿ (ಎಸ್ಎಲ್ಬಿಸಿ) ಹಲವು ಮಾರ್ಗೋಪಾಯಗಳನ್ನು ಸಲಹೆ ಮಾಡಿದ್ದು, ಒಂದು ಬಾರಿ ಎಟಿಎಂನಿಂದ ಹಣ ಪಡೆದು ಮತ್ತೊಂದು ಬಾರಿ ಹಣ ಪಡೆಯಲು ಕನಿಷ್ಠ ಆರರಿಂದ ಹನ್ನೆರಡು ಗಂಟೆ ಅಂತರ ನಿಗದಿಪಡಿಸುವುದು ಇವುಗಳಲ್ಲಿ ಪ್ರಮುಖ.
“ಹಲವು ವಂಚನೆಗಳು ರಾತ್ರಿ ಅಂದರೆ ಮಧ್ಯರಾತ್ರಿಯಿಂದ ಮುಂಜಾನೆವರೆಗೆ ನಡೆಯುತ್ತವೆ. ನಿರ್ದಿಷ್ಟ ಅವಧಿಯಲ್ಲಿ ವಹಿವಾಟು ಸ್ಥಗಿತಗೊಳಿಸುವುದು ವಂಚನೆ ತಡೆಯಲು ನೆರವಾಗಬಹುದು” ಎಂದು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ನ ಎಂಡಿ ಹಾಗೂ ಸಿಇಒ, ಎಸ್ಎಲ್ಬಿಸಿ ಸಂಯೋಜಕ ಮುಖೇಶ್ ಕುಮಾರ್ ಜೈನ್ ಅಭಿಪ್ರಾಯಪಟ್ಟಿದ್ದಾರೆ.
ಹದಿನೆಂಟು ಮಂದಿ ಉನ್ನತ ಬ್ಯಾಂಕ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಪ್ರಸ್ತಾವನೆ ಸ್ವೀಕರಿಸಿದಲ್ಲಿ, ನಿರ್ದಿಷ್ಟ ಅವಧಿಯಲ್ಲಿ ಹಣ ಪಡೆಯಲು ಸಾಧ್ಯವಾಗುವುದಿಲ್ಲ.ಈ ಬಗ್ಗೆ ಕೇವಲ ಚರ್ಚೆಗಳು ನಡೆದಿದ್ದು, ಕಾರ್ಯರೂಪಕ್ಕೆ ಬಂದಿಲ್ಲ.
2018-19ರ ಅವಧಿಯಲ್ಲಿ ದೆಹಲಿಯಲ್ಲಿ 179 ಎಟಿಎಂ ವಂಚನೆ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ (233) ಹೊರತುಪಡಿಸಿದರೆ ಇದು ದೇಶದಲ್ಲೇ ಅತ್ಯಧಿಕ. ಇತ್ತೀಚಿನ ತಿಂಗಳುಗಳಲ್ಲಿ ಕಾರ್ಡ್ ಕ್ಲೋನಿಂಗ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ದೊಡ್ಡಸಂಖ್ಯೆಯಲ್ಲಿ ವಿದೇಶಿಯರೂ ಈ ದಂಧೆಯ ಹಿಂದಿದ್ದಾರೆ. 2018-19ರಲ್ಲಿ ದೇಶಾದ್ಯಂತ 980 ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದು ಹಿಂದಿನ ವರ್ಷ (911)ಕ್ಕೆ ಹೋಲಿಸಿದರೆ ಅಧಿಕ.
ಬ್ಯಾಂಕ್ ಅಧಿಕಾರಿಗಳು ಇತರ ಹಲವು ಮಾರ್ಗೋಪಾಯಗಳನ್ನು ಶಿಫಾರಸ್ಸು ಮಾಡಿದ್ದು, ಒಂದು ಬಾರಿಯ ಪಾಸ್ವರ್ಡ್ (ಒಟಿಪಿ) ಸಂಪರ್ಕಿಸಿ ಹಣ ಪಡೆಯಲು ಅವಕಾಶ ನೀಡುವುದು ಇದರಲ್ಲಿ ಸೇರಿದೆ. ಇದರಿಂದಾಗಿ ಅನಧಿಕೃತ ಹಣ ಪಡೆಯುವ ಪ್ರಯತ್ನ ಮಾಡಿದರೆ ಖಾತೆದಾರರಿಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ವಹಿವಾಟು ನಡೆಸುವ ವ್ಯವಸ್ಥೆಯಂತೆ ಇದು ಇರುತ್ತದೆ ಎಂದು ಜೈನ್ ವಿವರಿಸಿದ್ದಾರೆ. ದ್ವಿಮುಖ ಸಂವಹನಕ್ಕಾಗಿ ಎಟಿಎಂಗೆ ಸಂಬಂಧಿಸಿ ಕೇಂದ್ರೀಯ ಕಣ್ಗಾವಲು ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಎಟಿಎಂನಿಂದ ಹೆಚ್ಚಿನ ಹಣ ಡ್ರಾ ಮಾಡುವಾಗ ಗ್ರಾಹಕರ ಮೊಬೈಲ್ ಗೆ ಸಂದೇಶ ಕಳುಹಿಸಿ, ಓಟಿಪಿ ನಂಬರ್ ಪಡೆಯುವ ವ್ಯವಸ್ಥೆ ರೂಪಿಸಲು ಸಹ ಚಿಂತಿಸಲಾಗಿದೆ. ಈ ರೀತಿಯ ವ್ಯವಸ್ಥೆಯಿಂದ ಡೆಬಿಟ್, ಕ್ರೆಡಿಟ್ ಕಾರ್ಡ್ ಗಳ ದುರ್ಬಳಕೆ ತಡೆಯಲು ಸಾಧ್ಯವಾಗಲಿದೆ. ಬೇರೆಯವರು ನಿಮ್ಮ ಕಾರ್ಡ್ ನಿಂದ ಹಣ ಡ್ರಾ ಮಾಡುತ್ತಿದ್ದರೆ, ಮೆಸೇಜ್ ಮೂಲಕ ಎಚ್ಚೆತ್ತುಕೊಳ್ಳಬಹುದು ಎಂದು ಮುಕೇಶ್ ಕುಮಾರ್ ಜೈನ್ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…