Featured

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ..  Vishwanews24

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ..

ಡಿ.31ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ ಎಡಿಜಿಪಿ ಭಾಸ್ಕರ್ ರಾವ್ ..

ಬೆಂಗಳೂರು : ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಭಾಸ್ಕರ್‌ ರಾವ್‌ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಒಪ್ಪಿಗೆ ನೀಡಿದ್ದು, ಡಿ.31ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರವು, ತಮ್ಮ ಸ್ವಯಂ ನಿವೃತ್ತಿಯ ಅರ್ಜಿಯನ್ನು ಅನುಮೋದಿಸಿದೆ ಎಂದು ಹೇಳಿದ್ದಾರೆ.

ಸ್ವಯಂ ನಿವೃತ್ತಿಯ ಬಳಿಕ ಭಾಸ್ಕರ್‌‌ ರಾವ್‌ ಅವರು ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ನಾನು ಟ್ರಾವೆಲ್‌ ಮಾಡಲು ಬಯಸಿದ್ದೇನೆ. ಅಲ್ಲದೇ, ನನ್ನ ಕುಟುಂಬಸ್ಥರೊಂದಿಗೆ ಸಮಯ ಕಳೆಯುವುದು, ಪಾಠ ಹೇಳಿಕೊಡುವುದರೊಂದಿಗೆ ಕಾಲ ಕಳೆಯಲು ಇಚ್ಛಿಸಿದ್ದೇನೆ” ಎಂದಿದ್ದಾರೆ.

1954ರಲ್ಲಿ ಜನಿಸಿದ ಭಾಸ್ಕರ್‌ ರಾವ್‌ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿದ್ದರು. ಇವರು ಕರ್ನಾಟಕ ಮೀಸಲು ಪೊಲೀಸ್‌ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಸಹ ಕೆಲಸ ನಿರ್ವಹಿಸಿದ್ದರು. 1900ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಹಾಲಿ ರೈಲ್ವೇ ಇಲಾಖೆಯ‌ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ವರ್ಷದ ಸೆಪ್ಟೆಂಬರ್‌‌ನಲ್ಲಿ ಭಾಸ್ಕರ್‌ ರಾವ್‌ ಅವರು ಸೇವೆಯಿಂದ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಅರ್ಜಿಯನ್ನು ಕೋರಿದ್ದರು.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

1 hour ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

7 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

9 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

10 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

10 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

10 hours ago