ಬೆಂಗಳೂರು : ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಒಪ್ಪಿಗೆ ನೀಡಿದ್ದು, ಡಿ.31ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರವು, ತಮ್ಮ ಸ್ವಯಂ ನಿವೃತ್ತಿಯ ಅರ್ಜಿಯನ್ನು ಅನುಮೋದಿಸಿದೆ ಎಂದು ಹೇಳಿದ್ದಾರೆ.
ಸ್ವಯಂ ನಿವೃತ್ತಿಯ ಬಳಿಕ ಭಾಸ್ಕರ್ ರಾವ್ ಅವರು ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ನಾನು ಟ್ರಾವೆಲ್ ಮಾಡಲು ಬಯಸಿದ್ದೇನೆ. ಅಲ್ಲದೇ, ನನ್ನ ಕುಟುಂಬಸ್ಥರೊಂದಿಗೆ ಸಮಯ ಕಳೆಯುವುದು, ಪಾಠ ಹೇಳಿಕೊಡುವುದರೊಂದಿಗೆ ಕಾಲ ಕಳೆಯಲು ಇಚ್ಛಿಸಿದ್ದೇನೆ” ಎಂದಿದ್ದಾರೆ.
1954ರಲ್ಲಿ ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಇವರು ಕರ್ನಾಟಕ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಸಹ ಕೆಲಸ ನಿರ್ವಹಿಸಿದ್ದರು. 1900ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಹಾಲಿ ರೈಲ್ವೇ ಇಲಾಖೆಯ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಈ ವರ್ಷದ ಸೆಪ್ಟೆಂಬರ್ನಲ್ಲಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಅರ್ಜಿಯನ್ನು ಕೋರಿದ್ದರು.
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…