Featured

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ..  Vishwanews24

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ..

ಡಿ.31ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ ಎಡಿಜಿಪಿ ಭಾಸ್ಕರ್ ರಾವ್ ..

ಬೆಂಗಳೂರು : ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಭಾಸ್ಕರ್‌ ರಾವ್‌ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಒಪ್ಪಿಗೆ ನೀಡಿದ್ದು, ಡಿ.31ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರವು, ತಮ್ಮ ಸ್ವಯಂ ನಿವೃತ್ತಿಯ ಅರ್ಜಿಯನ್ನು ಅನುಮೋದಿಸಿದೆ ಎಂದು ಹೇಳಿದ್ದಾರೆ.

ಸ್ವಯಂ ನಿವೃತ್ತಿಯ ಬಳಿಕ ಭಾಸ್ಕರ್‌‌ ರಾವ್‌ ಅವರು ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ನಾನು ಟ್ರಾವೆಲ್‌ ಮಾಡಲು ಬಯಸಿದ್ದೇನೆ. ಅಲ್ಲದೇ, ನನ್ನ ಕುಟುಂಬಸ್ಥರೊಂದಿಗೆ ಸಮಯ ಕಳೆಯುವುದು, ಪಾಠ ಹೇಳಿಕೊಡುವುದರೊಂದಿಗೆ ಕಾಲ ಕಳೆಯಲು ಇಚ್ಛಿಸಿದ್ದೇನೆ” ಎಂದಿದ್ದಾರೆ.

1954ರಲ್ಲಿ ಜನಿಸಿದ ಭಾಸ್ಕರ್‌ ರಾವ್‌ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿದ್ದರು. ಇವರು ಕರ್ನಾಟಕ ಮೀಸಲು ಪೊಲೀಸ್‌ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಸಹ ಕೆಲಸ ನಿರ್ವಹಿಸಿದ್ದರು. 1900ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಹಾಲಿ ರೈಲ್ವೇ ಇಲಾಖೆಯ‌ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ವರ್ಷದ ಸೆಪ್ಟೆಂಬರ್‌‌ನಲ್ಲಿ ಭಾಸ್ಕರ್‌ ರಾವ್‌ ಅವರು ಸೇವೆಯಿಂದ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಅರ್ಜಿಯನ್ನು ಕೋರಿದ್ದರು.

 

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

17 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

17 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

17 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

17 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

21 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

21 hours ago