ಬೆಂಗಳೂರು: ಕನ್ನಡ ಕಿರುತೆರೆ ಜನಪ್ರಿಯ ಧಾರಾವಾಹಿ ಗಟ್ಟಿಮೇಳ ಸೀರಿಯಲ್ ನಟ ರಕ್ಷಿತ್ ಅಂಡ್ ಗ್ಯಾಂಗ್ ಕುಡಿದು ರಂಪಾಟ ಮಾಡಿದ್ದು, ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಜಿಂಜರ್ ಲೇಕ್ ವ್ಯೂವ್ ಹೋಟೆಲ್ ಗೆ ತೆರಳಿದ್ದಂತ ಖಾಸಗಿ ಮನರಂಜನಾ ವಾಹಿನಿಯ ಸೀರಿಯಲ್ ತಂಡ ಊಟದ ವಿಚಾರಕ್ಕಾಗಿ ಹೋಟೆಲ್ ನವರೊಂದಿಗೆ ಕಿರಿಕ್ ಮಾಡಿಕೊಂಡಿದೆ. ಹೀಗಾಗಿ ಹೋಟೆಲ್ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದಂತ ಕೆಂಗೇರಿ ಪೊಲೀಸರಿಗೂ ಕುಡಿದ ಮತ್ತಿನಲ್ಲಿದ್ದಂತ ನಟ ರಕ್ಷಿತ್ ಸೇರಿದಂತೆ ಇತರರು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಹೊಯ್ಸಳ ಪೊಲೀಸರು ಪೊಲೀಸರಿಗೆ ಅವಾಜ್ ಹಾಕಿ, ಕಿರಿಕ್ ಮಾಡಿದಂತ ನಟ ರಕ್ಷಿತ್ ಸೇರಿದಂತೆ 7 ಮಂದಿಯನ್ನು ಜೀಪ್ ನಲ್ಲಿ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ.
ಈ ವಿಚಾರಕ್ಕಾಗಿ ಪೊಲೀಸರೊಂದಿಗೆ ಜಗಳ ಮಾಡಿದಂತ ಕಿರುತೆರೆ ನಟ ರಕ್ಷಿತ್, ರಂಜನ್, ರವಿಚಂದ್ರನ್, ಅಭಿಷೇಕ್, ರಾಕೇಶ್ ಕುಮಾರ್, ಅನುಷಾ ಸೇರಿದಂತೆ 7 ಮಂದಿ ವಿರುದ್ಧ ದೂರು ದಾಖಲಾಗಿರೋದಾಗಿ ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…