ಲಖನೌ: ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಒಂದಿಲ್ಲೊಂದು ಕಾರಣಗಳಿಂದ ಕೋಮು ಸಂಘರ್ಷಗಳು ನಡೆಯುತ್ತಿವೆ. ಈ ಮಧ್ಯೆ ಮುಸ್ಲಿಂ ಯುವಕನೊಬ್ಬ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡು ಅಭಿಮಾನ ತೋರಿದ್ದಾನೆ.
23 ವರ್ಷ ವಯಸ್ಸಿನ ಯಮೀನ್ ಸಿದ್ದಿಖಿ ತನ್ನ ಎದೆಯ ಮೇಲೆ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಹಚ್ಚೆ ಹಾಕಿಸಿಕೊಂಡಿದ್ದಾನೆ. ಯೋಗಿ ತನ್ನ ಮಾದರಿ ವ್ಯಕ್ತಿ ಎಂದು ಹೇಳಿಕೊಂಡಿರುವ ಆತ, ಯೋಗಿ ಅವರ ಜನ್ಮದಿನ ಪ್ರಯುಕ್ತ ಹಚ್ಚೆ ಹಾಕಿಸಿಕೊಂಡಿದ್ದಾಗಿ ಹೇಳಿದ್ದಾನೆ.
ಉತ್ತರ ಪ್ರದೇಶದ ಮೈನ್ಪುರಿ ಮತ್ತು ಫರುಖಾಬಾದ್ ಜಿಲ್ಲೆಗಳ ಗಡಿ ಭಾಗದ ಹಳ್ಳಿಯಲ್ಲಿ ಸಿದ್ದಿಖಿ ವಾಸಿಸುತ್ತಿದ್ದು, ಪಾದರಕ್ಷೆಗಳ ವ್ಯಾಪಾರ ನಡೆಸುತ್ತಿದ್ದಾನೆ.
ಯೋಗಿ ಅವರ ಹಚ್ಚೆ ಹಾಕಿಸಿಕೊಂಡಾಗಿನಿಂದ ಸ್ನೇಹಿತರು ಮತ್ತು ಸಂಬಂಧಿಕರಿಂದ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದ್ದರೂ, ಆ ಬಗ್ಗೆ ತಲೆ ಕಡೆಸಿಕೊಂಡಿಲ್ಲ ಎಂದು ಸಿದ್ದಿಖಿ ಹೇಳಿರುವುದಾಗಿ ವರದಿಯಾಗಿದೆ.
ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ಅವರಿಗೆ ಹಚ್ಚೆ ತೋರಿಸುವ ಆಸೆಯಿದೆ. ಅವರ ಮೇಲೆ ಅಪಾರ ಪ್ರೀತಿ ಮತ್ತು ಗೌರವವಿದೆ. ಅವರು ಅಧಿಕಾರಕ್ಕೆ ಬಂದಾಗಿನಿಂದ ಉತ್ತರ ಪ್ರದೇಶದಲ್ಲಿ ಬದಲಾವಣೆ ತಂದಿದ್ದಾರೆ. ಹಿಂದೂ ಮತ್ತು ಮುಸ್ಲಿಮರು ಎಲ್ಲರೂ ಎಲ್ಲ ಕಲ್ಯಾಣ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ, ಅದರಲ್ಲಿ ಯಾವುದೇ ತಾರತಮ್ಯ ಇಲ್ಲ’ ಎಂದು ಸಿದ್ದಿಖಿ ಹೇಳಿದ್ದಾನೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…