ಪ್ರಧಾನಿ ನರೇಂದ್ರ ಮೋದಿಯವರನ್ನು 18ನೇ ಲೋಕಸಭೆಯ ನಾಯಕನ್ನಾಗಿ ಎನ್ಡಿಎ ಸಂಸದರು ಆಯ್ಕೆ ಮಾಡಿದ್ದಾರೆ. ಈ ಮೊದಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಅಧಿಕೃತವಾಗಿ ಎನ್ಡಿಎಯ ಎಲ್ಲಾ ಸಂಸದರು ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.
ಇನ್ನೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ ಅದಾದ ಬಳಿಕ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಲು ಒಪ್ಪಿಗೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿ ಆ ಹುದ್ದೆಯನ್ನು ಅಲಂಕರಿಸಲು ವೇದಿಕೆ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟ ಸರ್ಕಾರ ರಚಿಸುವ ಪ್ರಸ್ತಾಪವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಲು ಅಣಿಯಾಗಿದ್ದು, ಮೋದಿ ಅವರು ಮೈತ್ರಿಕೂಟ ಸದಸ್ಯ ಪಕ್ಷಗಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…