Featured

ಎನ್‌ಟಿಆರ್ ಮಗ ನಂದಮೂರಿ ಹರಿಕೃಷ್ಣ ಭೀಕರ ರಸ್ತೆ ಅಪಘಾತದಲ್ಲಿ ಸಾವು https://wp.me/p9KQap-3Tf

ಹೈದರಾಬಾದ್:ತೆಲುಗು ಚಿತ್ರರಂಗದ ಖ್ಯಾತ ನಟ ಎನ್‌.ಟಿ ರಾಮರಾವ್ ಅವರ ಮಗ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಾಮೈದ ನಂದಮೂರಿ ಹರಿಕೃಷ್ಣ (61) ಬುಧವಾರ ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು 4.30ರ ಸಮಯದಲ್ಲಿ ಅವರು ಮನೆಯಿಂದ ಹೊರಟಿದ್ದರು.ನೆಲ್ಲೂರು ಜಿಲ್ಲೆಯ ಕಾವಲಿಗೆ ತೆರಳುತ್ತಿದ್ದಾಗ ತೆಲಂಗಾಣದ ನಲ್ಗೊಂಡ ಬಳಿಯ ಅನ್ನೆಪರ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಹರಿಕೃಷ್ಣ ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ವಯಂ ಕಾರುಚಾಲನೆ ಮಾಡುತ್ತಿದ್ದ ಹರಿಕೃಷ್ಣ, ಅತಿ ವೇಗದಿಂದ ಚಲಾಯಿಸುತ್ತಿದ್ದರು. ಆಗ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ ಎನ್ನಲಾಗಿದೆ.ಅವರ ಜತೆಗಿದ್ದ ಇನ್ನೂ ಇಬ್ಬರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಹರಿಕೃಷ್ಣ ಅವರಿಗೆ ಮೊದಲ ಪತ್ನಿಯಿಂದ ಜಾನಕಿ ರಾಮ್, ಕಲ್ಯಾಣ ರಾಮ್ ಮತ್ತು ಸುಹಾಸಿನಿ ಎಂಬ ಮಕ್ಕಳಿದ್ದಾರೆ. ಬಳಿಕ ಮತ್ತೊಂದು ಮದುವೆಯಾಗಿದ್ದ ಅವರಿಗೆ ಜೂನಿಯರ್ ಎನ್‌ಟಿಆರ್ ಎಂದೇ ಖ್ಯಾತರಾದ ತಾರಕ ರಾಮರಾವ್ ಜನಿಸಿದ್ದರು.

1956ರ ಸೆಪ್ಟೆಂಬರ್ 2ರಂದು ಆಂಧ್ರಪ್ರದೇಶದ ನಿಮ್ಮಕರುದಲ್ಲಿ ಜನಿಸಿದ್ದ ಹರಿಕೃಷ್ಣ ಬಾಲನಟನಾಗಿ ಕಾಣಿಸಿಕೊಂಡಿದ್ದರು.ತೆಲುಗು ಚಿತ್ರರಂಗದ ಖ್ಯಾತ ನಟ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಂದಮೂರಿ ತಾರಕ ರಾಮರಾವ್ (ಎನ್‌ಟಿಆರ್) ಅವರ ನಾಲ್ಕನೆಯ ಮಗನಾಗಿದ್ದ ಹರಿಕೃಷ್ಣ, ತೆಲುಗು ದೇಶಂ ಪಾರ್ಟಿ ಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.ಶ್ರೀ ಕೃಷ್ಣಾವತಾರಂ ಚಿತ್ರದ ಮೂಲಕ 1964ರಲ್ಲಿ ಬಾಲ ಕೃಷ್ಣನ ಪಾತ್ರದಲ್ಲಿ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿದ್ದಕೊಂಡಿದ್ದ ಹರಿಕೃಷ್ಣ, ತಲ್ಲ ಪೆಲ್ಲಮಾ, ತಾತಮ್ಮ ಕಾಲ, ರಾಮ್ ರಹೀಮ್, ದಾನ ವೀರ ಶೂರ ಕರ್ಣ ಸಿನಿಮಾಗಳಲ್ಲಿ ನಟಿಸಿದ್ದರು.1977ರಿಂದ 1998ರವರೆಗೂ ಅವರು ಮತ್ತೆ ಬಣ್ಣಹಚ್ಚಿರಲಿಲ್ಲ. ಶ್ರೀ ರಾಮುಲಯ್ಯಾ ಸಿನಿಮಾದ ಮೂಲಕ ಮತ್ತೆ ಬೆಳ್ಳಿತೆರೆಗೆ ಪ್ರವೇಶಿಸಿದ್ದರು. ಸೀತಾರಾಮ ರಾಜು, ಲಹಿರಿ ಲಹಿರಿ ಲಹಿರಿಲೊ, ಶಿವರಾಮ ರಾಜು, ಸೀತಯ್ಯಾ, ಟೈಗರ್ ಹರಿಶ್ಚಂದ್ರ ಪ್ರಸಾದ್, ಸ್ವಾಮಿ ಚಿತ್ರಗಳಲ್ಲಿ ನಟಿಸಿದ್ದರು. 2005ರಲ್ಲಿ ನಟಿಸಿದ್ದ ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿದೆ.

 

 

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago