Featured

ಎನ್‌ಟಿಆರ್ ಮಗ ನಂದಮೂರಿ ಹರಿಕೃಷ್ಣ ಭೀಕರ ರಸ್ತೆ ಅಪಘಾತದಲ್ಲಿ ಸಾವು https://wp.me/p9KQap-3Tf

ಹೈದರಾಬಾದ್:ತೆಲುಗು ಚಿತ್ರರಂಗದ ಖ್ಯಾತ ನಟ ಎನ್‌.ಟಿ ರಾಮರಾವ್ ಅವರ ಮಗ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಾಮೈದ ನಂದಮೂರಿ ಹರಿಕೃಷ್ಣ (61) ಬುಧವಾರ ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು 4.30ರ ಸಮಯದಲ್ಲಿ ಅವರು ಮನೆಯಿಂದ ಹೊರಟಿದ್ದರು.ನೆಲ್ಲೂರು ಜಿಲ್ಲೆಯ ಕಾವಲಿಗೆ ತೆರಳುತ್ತಿದ್ದಾಗ ತೆಲಂಗಾಣದ ನಲ್ಗೊಂಡ ಬಳಿಯ ಅನ್ನೆಪರ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಹರಿಕೃಷ್ಣ ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ವಯಂ ಕಾರುಚಾಲನೆ ಮಾಡುತ್ತಿದ್ದ ಹರಿಕೃಷ್ಣ, ಅತಿ ವೇಗದಿಂದ ಚಲಾಯಿಸುತ್ತಿದ್ದರು. ಆಗ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ ಎನ್ನಲಾಗಿದೆ.ಅವರ ಜತೆಗಿದ್ದ ಇನ್ನೂ ಇಬ್ಬರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಹರಿಕೃಷ್ಣ ಅವರಿಗೆ ಮೊದಲ ಪತ್ನಿಯಿಂದ ಜಾನಕಿ ರಾಮ್, ಕಲ್ಯಾಣ ರಾಮ್ ಮತ್ತು ಸುಹಾಸಿನಿ ಎಂಬ ಮಕ್ಕಳಿದ್ದಾರೆ. ಬಳಿಕ ಮತ್ತೊಂದು ಮದುವೆಯಾಗಿದ್ದ ಅವರಿಗೆ ಜೂನಿಯರ್ ಎನ್‌ಟಿಆರ್ ಎಂದೇ ಖ್ಯಾತರಾದ ತಾರಕ ರಾಮರಾವ್ ಜನಿಸಿದ್ದರು.

1956ರ ಸೆಪ್ಟೆಂಬರ್ 2ರಂದು ಆಂಧ್ರಪ್ರದೇಶದ ನಿಮ್ಮಕರುದಲ್ಲಿ ಜನಿಸಿದ್ದ ಹರಿಕೃಷ್ಣ ಬಾಲನಟನಾಗಿ ಕಾಣಿಸಿಕೊಂಡಿದ್ದರು.ತೆಲುಗು ಚಿತ್ರರಂಗದ ಖ್ಯಾತ ನಟ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಂದಮೂರಿ ತಾರಕ ರಾಮರಾವ್ (ಎನ್‌ಟಿಆರ್) ಅವರ ನಾಲ್ಕನೆಯ ಮಗನಾಗಿದ್ದ ಹರಿಕೃಷ್ಣ, ತೆಲುಗು ದೇಶಂ ಪಾರ್ಟಿ ಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.ಶ್ರೀ ಕೃಷ್ಣಾವತಾರಂ ಚಿತ್ರದ ಮೂಲಕ 1964ರಲ್ಲಿ ಬಾಲ ಕೃಷ್ಣನ ಪಾತ್ರದಲ್ಲಿ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿದ್ದಕೊಂಡಿದ್ದ ಹರಿಕೃಷ್ಣ, ತಲ್ಲ ಪೆಲ್ಲಮಾ, ತಾತಮ್ಮ ಕಾಲ, ರಾಮ್ ರಹೀಮ್, ದಾನ ವೀರ ಶೂರ ಕರ್ಣ ಸಿನಿಮಾಗಳಲ್ಲಿ ನಟಿಸಿದ್ದರು.1977ರಿಂದ 1998ರವರೆಗೂ ಅವರು ಮತ್ತೆ ಬಣ್ಣಹಚ್ಚಿರಲಿಲ್ಲ. ಶ್ರೀ ರಾಮುಲಯ್ಯಾ ಸಿನಿಮಾದ ಮೂಲಕ ಮತ್ತೆ ಬೆಳ್ಳಿತೆರೆಗೆ ಪ್ರವೇಶಿಸಿದ್ದರು. ಸೀತಾರಾಮ ರಾಜು, ಲಹಿರಿ ಲಹಿರಿ ಲಹಿರಿಲೊ, ಶಿವರಾಮ ರಾಜು, ಸೀತಯ್ಯಾ, ಟೈಗರ್ ಹರಿಶ್ಚಂದ್ರ ಪ್ರಸಾದ್, ಸ್ವಾಮಿ ಚಿತ್ರಗಳಲ್ಲಿ ನಟಿಸಿದ್ದರು. 2005ರಲ್ಲಿ ನಟಿಸಿದ್ದ ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿದೆ.

 

 

 

 

Vishwa News 24

Recent Posts

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

14 minutes ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

25 minutes ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

36 minutes ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

43 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

51 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

4 hours ago