ಹೈದರಾಬಾದ್:ತೆಲುಗು ಚಿತ್ರರಂಗದ ಖ್ಯಾತ ನಟ ಎನ್.ಟಿ ರಾಮರಾವ್ ಅವರ ಮಗ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಾಮೈದ ನಂದಮೂರಿ ಹರಿಕೃಷ್ಣ (61) ಬುಧವಾರ ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು 4.30ರ ಸಮಯದಲ್ಲಿ ಅವರು ಮನೆಯಿಂದ ಹೊರಟಿದ್ದರು.ನೆಲ್ಲೂರು ಜಿಲ್ಲೆಯ ಕಾವಲಿಗೆ ತೆರಳುತ್ತಿದ್ದಾಗ ತೆಲಂಗಾಣದ ನಲ್ಗೊಂಡ ಬಳಿಯ ಅನ್ನೆಪರ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಹರಿಕೃಷ್ಣ ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸ್ವಯಂ ಕಾರುಚಾಲನೆ ಮಾಡುತ್ತಿದ್ದ ಹರಿಕೃಷ್ಣ, ಅತಿ ವೇಗದಿಂದ ಚಲಾಯಿಸುತ್ತಿದ್ದರು. ಆಗ ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ ಎನ್ನಲಾಗಿದೆ.ಅವರ ಜತೆಗಿದ್ದ ಇನ್ನೂ ಇಬ್ಬರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಹರಿಕೃಷ್ಣ ಅವರಿಗೆ ಮೊದಲ ಪತ್ನಿಯಿಂದ ಜಾನಕಿ ರಾಮ್, ಕಲ್ಯಾಣ ರಾಮ್ ಮತ್ತು ಸುಹಾಸಿನಿ ಎಂಬ ಮಕ್ಕಳಿದ್ದಾರೆ. ಬಳಿಕ ಮತ್ತೊಂದು ಮದುವೆಯಾಗಿದ್ದ ಅವರಿಗೆ ಜೂನಿಯರ್ ಎನ್ಟಿಆರ್ ಎಂದೇ ಖ್ಯಾತರಾದ ತಾರಕ ರಾಮರಾವ್ ಜನಿಸಿದ್ದರು.
1956ರ ಸೆಪ್ಟೆಂಬರ್ 2ರಂದು ಆಂಧ್ರಪ್ರದೇಶದ ನಿಮ್ಮಕರುದಲ್ಲಿ ಜನಿಸಿದ್ದ ಹರಿಕೃಷ್ಣ ಬಾಲನಟನಾಗಿ ಕಾಣಿಸಿಕೊಂಡಿದ್ದರು.ತೆಲುಗು ಚಿತ್ರರಂಗದ ಖ್ಯಾತ ನಟ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಂದಮೂರಿ ತಾರಕ ರಾಮರಾವ್ (ಎನ್ಟಿಆರ್) ಅವರ ನಾಲ್ಕನೆಯ ಮಗನಾಗಿದ್ದ ಹರಿಕೃಷ್ಣ, ತೆಲುಗು ದೇಶಂ ಪಾರ್ಟಿ ಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.ಶ್ರೀ ಕೃಷ್ಣಾವತಾರಂ ಚಿತ್ರದ ಮೂಲಕ 1964ರಲ್ಲಿ ಬಾಲ ಕೃಷ್ಣನ ಪಾತ್ರದಲ್ಲಿ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿದ್ದಕೊಂಡಿದ್ದ ಹರಿಕೃಷ್ಣ, ತಲ್ಲ ಪೆಲ್ಲಮಾ, ತಾತಮ್ಮ ಕಾಲ, ರಾಮ್ ರಹೀಮ್, ದಾನ ವೀರ ಶೂರ ಕರ್ಣ ಸಿನಿಮಾಗಳಲ್ಲಿ ನಟಿಸಿದ್ದರು.1977ರಿಂದ 1998ರವರೆಗೂ ಅವರು ಮತ್ತೆ ಬಣ್ಣಹಚ್ಚಿರಲಿಲ್ಲ. ಶ್ರೀ ರಾಮುಲಯ್ಯಾ ಸಿನಿಮಾದ ಮೂಲಕ ಮತ್ತೆ ಬೆಳ್ಳಿತೆರೆಗೆ ಪ್ರವೇಶಿಸಿದ್ದರು. ಸೀತಾರಾಮ ರಾಜು, ಲಹಿರಿ ಲಹಿರಿ ಲಹಿರಿಲೊ, ಶಿವರಾಮ ರಾಜು, ಸೀತಯ್ಯಾ, ಟೈಗರ್ ಹರಿಶ್ಚಂದ್ರ ಪ್ರಸಾದ್, ಸ್ವಾಮಿ ಚಿತ್ರಗಳಲ್ಲಿ ನಟಿಸಿದ್ದರು. 2005ರಲ್ಲಿ ನಟಿಸಿದ್ದ ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…