Featured

ಎಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ: ಸಚಿವ ಕೆ. ಎಚ್.ಮುನಿಯಪ್ಪ – Vishwanews24

ಎಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ: ಸಚಿವ ಕೆ. ಎಚ್.ಮುನಿಯಪ್ಪ

ಬೆಂಗಳೂರು: ಹೊಸ ಆದ್ಯತಾ ಪಡಿತರ ಚೀಟಿ(ಎಪಿಎಲ್)ಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿ(ಎಪಿಎಲ್) ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಪರಿಶೀಲಿಸಿ ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈವರೆಗೆ 57,651 ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್ಗಳನ್ನು ವಿತರಿಸಲಾಗಿದೆ. ಬಾಕಿ ಇರುವ ಉಳಿದ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ಜಂಟಿ/ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ಹಿಂದಿನ ಸರಕಾರದ ಅವಧಿಯಲ್ಲಿ ಈಅರ್ಜಿಗಳನ್ನು ಸಲ್ಲಿಸಲಾಗಿತ್ತು. ಚುನಾವಣೆ ಹಾಗೂ ಇನ್ನೀತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳನ್ನು ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಅವುಗಳನ್ನು ಮಾ.31ರೊಳಗೆ ವಿಲೇವಾರಿ ಮಾಡಿ ಎಪ್ರಿಲ್ 1ರಿಂದ ಹೊಸ ಅರ್ಜಿಗಳ ಆಹ್ವಾನಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದರು.

ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ತಹಶೀಲ್ದಾರ್ ಶಿಫಾರಸು ವರದಿ ಆಧರಿಸಿ ಬರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಕಾರ್ಡ್ ಒದಗಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಉಡುಪಿ ಜಿಲ್ಲೆಯಲ್ಲಿ 2021 ಜನವರಿಯಿಂದ 2023ರ ಮಾರ್ಚ್ ವರೆಗೆ 13,104 ಆದ್ಯತಾ ಪಡಿತರ ಚೀಟಿ ಕೋರಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 10,738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದವುಗಳನ್ನು ಪರಿಶೀಲಿಸಿ ಅರ್ಹ ಅರ್ಜಿಗಳಿಗೆ ಕಾರ್ಡ್ ಒದಗಿಸುವುದಕ್ಕೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದ ಸಚಿವ ಮುನಿಯಪ್ಪ, ಉಡುಪಿ ಜಿಲ್ಲೆಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 134 ಅರ್ಹ ಫಲಾನುಭವಿಗಳಿಗೆ ಆದ್ಯತಾ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ ಎಂದರು

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

20 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

20 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

20 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

21 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

21 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

21 hours ago