ಕಾಪು : ಸಮಗ್ರವಾಗಿ ಜೀರ್ಣೋದ್ಧಾರಗೊಂಡು ಕಂಗೊಲಿಸುತ್ತಿರುವ ಕಾಪು ಪೇಟೆಯ ಕೊಂಕಣಿ ಮಠ ಶ್ರೀ ವೆಂಕಟರಮಣ ದೇವಾಸ್ಥಾನದಲ್ಲಿ ಪ್ರಥಮ ಪ್ರತಿಷ್ಠಾ ವರ್ದಂತಿಯ ಪ್ರಯುಕ್ತ ಸಾನ್ನಿಧ್ಯಾಭಿವೃದ್ಧಿಗಾಗಿ ಎಪ್ರಿಲ್ 10 ರಂದು ಸಹಸ್ರ ಕುಂಭಾಭಿಷೇಕ ನಡೆಯಲಿದೆ. ಕಾಶಿ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಶ್ರೀಪಾದಂಗಳವರ ಅಮೃತಹಸ್ತದಿಂದ ಜರಗಲಿರುವ ಸಹಸ್ರ ಕುಂಭಾಭಿಷೇಕದ ಪ್ರಯುಕ್ತ ಎಪ್ರಿಲ್ 7 ರಿಂದ ಮೊದಲ್ಗೊಂಡು ಎಪ್ರಿಲ್ 10 ರ ವರೆಗೆ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿವೆ.
ಎಪ್ರಿಲ್ 7 ರಂದು ಸಂಜೆ 4.00 ಕ್ಕೆ ಕಾಪು ಶ್ರೀ ಹಳೇ ಮಾರಿಗುಡಿಯಿಂದ ಹೊರಕಾಣಿಕೆ ಮೆರವಣಿಗೆ ನಡೆಯಲಿದೆ. ಎಪ್ರೀಲ್ 8 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸ್ವ ಸಮಾಜದ ಪುರುಷ ಸದಸ್ಯರಿಂದ ಲಕ್ಷ ತುಳಸಿ ಅರ್ಚನೆ ನಡೆಯಲಿದೆ. ಎಪ್ರಿಲ್ 9 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸ್ವ ಸಮಾಜದ ಸುಮಂಗಲಿ ಮಹಿಳೆಯರಿಂದ ಶ್ರೀ ಲಕ್ಷ್ಮೀ ಸಹಸ್ರ ನಾಮದಿಂದ ಕುಂಕುಮಾರ್ಚನೆ ನಡೆಯಲಿದೆ. ಎಪ್ರಿಲ್ 10 ರಂದು ಬೆಳಗ್ಗೆ 4.30 ಕ್ಕೆ ಸರಿಯಾಗಿ ಕವಾಟೋದ್ಘಾಟನೆ ನಡೆದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ. ಬಳಿಕ ಕಾಶಿ ಮಠಾಧೀಶರನ್ನು ಸ್ವಾಗತಿಸಿಕೊಂಡು ,9.30 ರಿಂದ ಸ್ವಾಮೀಜಿಗಳ ಅಮೃತಹಸ್ತದಿಂದ ತಂತ್ರ ಸಾರೋಕ್ತ ಸಹಸ್ರ ಕುಂಭಾಭಿಷೇಕ ನಡೆಯಲಿದೆ. ತದನಂತರ ಮಹಾಪೂಜೆ , ಪ್ರಸಾದ ವಿತರಣೆ ಹಾಗೂ ಮಹಾ ಸಮಾರಾಧನೆ ಜರಗಲಿದೆ ಎಂದು ಕ್ಷೇತ್ರದ ಜೀರ್ಣೋದ್ಧಾರ ಸಮಿತಿ, ಆಡಳಿತ ಮಂಡಳಿ ಮತ್ತು ಕಾಪು ಪೇಟೆ ಹತ್ತು ಸಮಸ್ತರ ಪ್ರಕಟನೆ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…